ಜನ ಮನದ ನಾಡಿ ಮಿಡಿತ

Advertisement

ಎಣ್ಮಕಜೆ ಗ್ರಾಪಂ ನ ಸ್ವಾತಂತ್ರ್ಯ ದಿನಾಚರಣೆಗೆ ಸಾಧಕರಿಗೆ ಸನ್ಮಾನ- ಪ್ರತಿಭಾ ಸಂಗಮ ಸಂಗೀತ ಸೌರಭ ಕಾರ್ಯಕ್ರಮ

ಪೆರ್ಲ: ಎಣ್ಮಕಜೆ ಗ್ರಾ.ಪಂ.ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಾಧಕರಿಗೆ ಸನ್ಮಾನ, ಎಪ್ಲಸ್ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ದೇಶ ಭಕ್ತಿ ಗೀತೆಗಳ ಸಂಗೀತ ಸೌರಭ ಕಾರ್ಯಕ್ರಮದೊಂದಿಗೆ ವೈವಿಧ್ಯಮಯವಾಗಿ ಆಚರಿಸಲಾಯಿತು. ಬಜಕೂಡ್ಲು ಸಮೀಪದ ಕಾನ ಎಂಬಲ್ಲಿರುವ ಸಾಂತ್ವನ ವಿಶೇಷ ಬಡ್ಸ್ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಎಣ್ಮಕಜೆ ಗ್ರಾ.ಪಂ.ಅಧ್ಯಕ್ಷ ಸೋಮಶೇಖರ್ ಜೆ.ಎಸ್.ಅಧ್ಯಕ್ಷತೆ ವಹಿಸಿದ್ದರು.


ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ ನಾಯ್ಕ್,ಬ್ಲೋಕ್ ಪಂ.ಸದಸ್ಯ ಕೆ.ಪಿ.ಅನಿಲ್ ಕುಮಾರ್, ಎಣ್ಮಕಜೆ ಗ್ರಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಎಸ್.ಗಾಂಭೀರ್, ಸೌದಾಭಿ ಹನೀಫ್, ಜಯಶ್ರೀ ಕುಲಾಲ್, ಹಾಗೂ ಪಂಚಾಯತು ಸದಸ್ಯರಾದ ಮಹೇಶ್ ಭಟ್, ಶಶಿಧರ, ನರಸಿಂಹ ಪೂಜಾರಿ,ರಾಮಚಂದ್ರ, ಕುಸುಮಾವತಿ, ಉಷಾ, ಝರಿನಾ ಮುಸ್ತಾಫ,ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಜಲಜಾಕ್ಷಿ ಹಾಗೂ ಪಂ.ಉದ್ಯೋಗಿಗಳು,ಪಂ.ಯೋಜನಾ ಸಮಿತಿಯ ಉಪಾಧ್ಯಕ್ಷೆ ಆಯಿಷಾ ಎ.ಎ, ವಿವಿಧ ಇಲಾಖಾ ಅಧಿಕಾರಿಗಳು ಪಾಲ್ಗೊಂಡರು. ಈ ಸಂದರ್ಭದಲ್ಲಿ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಪ್ಪಯ್ಯ ಮಣಿಯಾಣಿ ಕಾಟುಕುಕ್ಕೆ, ಸದಾಶಿವ ನಾಯ್ಕ್ ಖಂಡಿಗೆ, ಈಶ್ವರ ನಾಯ್ಕ ವಾಣಿನಗರ, ನಿವೃತ್ತ ಪ್ರಾಂಶುಪಾಲ ಬಾಪೂಂಞಿ ಮಾಸ್ತರ್, ಸಾಹಿತಿ ಹರೀಶ್ ಪೆರ್ಲ, ಕಾಷ್ಠ ಶಿಲ್ಪಿ, ನ್ಯಾಯವಾದಿ ಜಿ.ಕೆ.ಭಟ್ ಪೂವಾಳೆ, ಆಯುರ್ವೇದಿಕ್ ಶಿಕ್ಷಣದಲ್ಲಿ ಪ್ರಥಮ ರಾಂಕ್ ಚಿನ್ನದ ಪದಕ ವಿಜೇತೆ ಡಾ.ರಮ್ಯ ದರ್ಬೆ, ಕೃಷಿ ಯಂತ್ರೋಪಕರಣ ಅವಿಷ್ಕಾರಿಸಿದ ಗೋಪಾಲಕೃಷ್ಣ ಶರ್ಮ ಕಾಚಿಕ್ಕಾಡು, ಯುವ ಕವಯಿತ್ರಿ ಸುಜಯ ಸಜಂಗದ್ದೆ, ಕ್ರೀಡಾ ಪಟು ರಾಕೇಶ್ ಕುಮಾರ್ ನಲ್ಕ, ಹಾಗೂ ಎಸ್ಸಸ್ಸೆಲ್ಸಿ, ಪ್ಲಸ್ ಟು ಪರೀಕ್ಷೆಯಲ್ಲಿ ಎ ಪ್ಲಸ್ ಗಳಿಸಿದ ಪಂಚಾಯತು ಮಟ್ಟದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ಎಸ್ಸಸ್ಸೆಲ್ಸಿ ಪರೀಕ್ಷೆಯಲ್ಲಿ ನೂರು ಶೇಕಡಾ ತೇರ್ಗಡೆ ದಾಖಲಿಸಿದ ಪೆರ್ಲ ಸತ್ಯನಾರಾಯಣ ಶಾಲೆ, ಪಡ್ರೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆ, ಕಾಟುಕುಕ್ಕೆ ಶ್ರೀಸುಬ್ರಹ್ಮಣ್ಯೇಶ್ವರ ಹೈಯರ್ ಸೆಕೆಂಡರಿ ಶಾಲೆ, ಶೇಣಿ ಶ್ರೀಶಾರದಾಂಬ ಹೈಯರ್ ಸೆಕೆಂಡರಿ ಶಾಲೆಗೆ ವಿಶೇಷ ಪುರಸ್ಕಾರ ವಿತರಿಸಲಾಯಿತು. ಪ್ರೇಮ್ ಚಂದ್ ಪಿ ಎಸ್ ಸ್ವಾಗತಿಸಿ .ಬಡ್ಸ್ ಶಾಲೆ ಪ್ರಿನ್ಸಿಪಾಲ್‌ ಮರಿಯಾಂಬಿ ವಂದಿಸಿದರು‌.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!