ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ 10ನೇ ತೋಕೂರು ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಂಸ್ಥೆಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಭಾರತೀಯ ಭೂಸೇನೆಯ ನಿವೃತ್ತ ಯೋಧರಾದ ರಾಜೇಶ್ ನಾಯ್ಕ್ ರವರು ಧ್ವಜಾರೋಹಣವನ್ನು ನೆರವೇರಿಸಿ ಕೊಟ್ಟರು ಕಾರ್ಯಕ್ರಮದಲ್ಲಿ ಯಕ್ಷ ದೇಗುಲ ಹತ್ತು ಸಮಸ್ತರು 10ನೇ ತೋಕೂರು ಅಧ್ಯಕ್ಷರಾದ ಸದಾಶಿವ ಸಾಲ್ಯಾನ್, ವಿಶ್ವ ಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿಯ ಅಧ್ಯಕ್ಷರಾದ ದಿನಕರ ಸಾಲ್ಯಾನ್, ಕೋರ್ದಬ್ಬು ದೈವಸ್ಥಾನ ಹತ್ತನೇ ತೋಕೂರು ಇದರ ಗುರಿಕಾರರಾದ ಗೋಪಾಲಕೃಷ್ಣ ಸಾಲ್ಯಾನ್, ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇಲ್ಲಿನ ಗೌರವಾಧ್ಯಕ್ಷರಾದ ಗಣೇಶ್ ಜಿ ಬಂಗೇರ, ಫೇಮಸ್ ಯೂತ್ ಕ್ಲಬ್ಬಿನ ಗೌರವಾಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ ಅಧ್ಯಕ್ಷರಾದ ಭಾಸ್ಕರ್ ಅಮೀನ್ ತೋಕೂರು ಉಪಾಧ್ಯಕ್ಷರಾದ ಭೋಜಕೋಟ್ಯಾನ್ ಕಾರ್ಯದರ್ಶಿ ಹಿಮಕರ್ ಕೋಶಾಧಿಕಾರಿ ನವೀನ್ ಚಂದ್ರ ಮತ್ತು ಮಹಿಳಾ ಅಧ್ಯಕ್ಷರಾದ ಪ್ರೇಮಲತಾ ಯೋಗೀಶ್ ಮತ್ತು ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಧ್ವಜಾರೋಹಣದ ನಂತರ ಆಹ್ವಾನಿತ ತಂಡಗಳಿಗೆ ವಾಲಿಬಾಲ್ ಕ್ರೀಡಾಕೂಟವನ್ನು ನೆರವೇರಿಸಿ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಮಹಮ್ಮದ್ ಶರೀಫ್ ರವರು ನಿರೂಪಿಸಿದರು.




