ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ್ ಅರೆಮಂಗಿಲ ಸುಬ್ಬಣ್ಣ ನಾಯ್ಕ ಅಸೌಖ್ಯದಿಂದ ನಿಧನ

ಪೆರ್ಲ : ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ ಅರೆಮಂಗಿಲ ಸುಬ್ಬಣ್ಣ ನಾಯ್ಕ ಪಿ. (53) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತಡ ರಾತ್ರಿ ನಿಧನರಾದರು. ತೀವ್ರ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ತಮ್ಮ ಸ್ವಗೃಹ ಅರೆಮಂಗಿಲದ ಮನೆಯಲ್ಲಿ ನಿಧನರಾಗಿದ್ದಾರೆ.

ಪಳ್ಳಕಾನ ನಿವಾಸಿಗಳಾಗಿದ್ದ ದಿ.ರಾಮನಾಯ್ಕ – ಕಾವೇರಿ ದಂಪತಿಗಳ ಪುತ್ರರಾಗಿದ್ದ ಸುಬ್ಬಣ್ಣ ನಾಯ್ಕ ಆರಂಭದಲ್ಲಿ ಕೆಎಸ್ಸಾರ್ಟಿಸಿ ಇಲಾಖೆಯಲ್ಲಿ ಸರಕಾರಿ ಸೇವೆಗೆ ನಿಯುಕ್ತರಾಗಿ ಬಳಿಕ ಕಂದಾಯ ಇಲಾಖೆಯ ವಿಲೇಜ್ ಆಫೀಸರ್ ಆಗಿ ವಿವಿಧ ಕಡೆಗಳಲ್ಲಿ ಸೇವೆಗೈದಿದ್ದಾರೆ. ಶೇಣಿ, ಪೆರ್ಲ, ಕಾಟುಕುಕ್ಕೆ, ಬಾಯಾರು, ಮೀಂಜ ಮೊದಲಾದ ಕಡೆಗಳಲ್ಲಿ ವಿಲೇಜ್ ಅಧಿಕಾರಿಯಾಗಿದ್ದ ಇವರು ಬಳಿಕ ಮಂಜೇಶ್ವರ ತಾಲೂಕು ಕಚೇರಿ ಡೆಪ್ಯೂಟಿ ತಹಶಿಲ್ದಾರ್ ಆಗಿ ಭಡ್ತಿ ಹೊಂದಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ ಭವಾನಿ, ಮಕ್ಕಳಾದ ಜಿತಿನ್ ಎಸ್, ನಿವೇದ್ ಹಾಗೂ ಸಹೋದರರಾದ ಈಶ್ವರ ನಾಯ್ಕ, ಗಣೇಶ (ಕೇರಳ ಗ್ರಾಮೀಣ ಬ್ಯಾಂಕ್ ಉದ್ಯೋಗಿ), ಸಹೋದರಿಯರಾದ ದೇವಕಿ, ಗೌರಿ ಎಂಬಿವರನ್ನಗಲಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!