ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ಪ್ರಧಾನ ರಸ್ತೆಯಲ್ಲಿ; ಸ್ಥಳೀಯರ ಆಕ್ರೋಶ

ಮುಲ್ಕಿ: ಮುಲ್ಕಿ ಬಸ್ಸು ನಿಲ್ದಾಣದ ಬಳಿ ಕಾರ್ಯಾಚರಿಸುತ್ತಿರುವ ಬಹು ಮಹಡಿ ಕಟ್ಟಡದ ತ್ಯಾಜ್ಯ ನೀರು ಪ್ರಧಾನ ರಸ್ತೆಯಲ್ಲಿ ಹರಿಯುತ್ತಿದ್ದು ದುರ್ವಾಸನೆಯುಕ್ತ ವಾತಾವರಣ ಸೃಷ್ಟಿಯಾಗಿ ರೋಗಗಳ ಭೀತಿ ಎದುರಾಗಿದೆ ಎಂದು ಮಾಜೀ ನ. ಪಂ.ಸದಸ್ಯ ಅಬ್ದುಲ್ ರಜಾಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್ ನಿಲ್ದಾಣದ ಬಳಿ ಕಾರ್ಯಾಚರಿಸಿರುವ ಫಾತಿಮಾ ಟವರ್ಸ್ ಬಹು ಮಹಡಿ ಕಟ್ಟಡದಲ್ಲಿ ಮಕ್ಕಳ ವಿದ್ಯಾರ್ಥಿ ನಿಲಯದ ತ್ಯಾಜ್ಯ ನೀರು ಪಿಟ್ ನಲ್ಲಿ ಭರ್ತಿಯಾಗಿ ರಸ್ತೆಗೆ ಹರಿಯುತ್ತಿದ್ದು ಕೂಡಲೇ ಕಟ್ಟಡದ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಮುಲ್ಕಿ ನಗರ ಪಂಚಾಯತಿಗೆ ದೂರು ನೀಡಿದ್ದಾರೆ. ದೂರು ಸ್ವೀಕರಿಸಿ ಕೂಡಲೇ ಕಾರ್ಯಪ್ರವೃತ್ತರಾದ ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್ಎಂ ಮೇಸ್ತ, ಆರೋಗ್ಯಾಧಿಕಾರಿ ಲಿಲ್ಲಿ ನಾಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕಟ್ಟಡದ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಗೆ ಕೂಡ ದೂರು ನೀಡಿದ್ದು ಕೂಡಲೇ ಸರಿಪಡಿಸದಿದ್ದರೆ ಕಟ್ಟಡದ ಪರವಾನಿಗೆ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!