ಜನ ಮನದ ನಾಡಿ ಮಿಡಿತ

Advertisement

ಮಂಚಿ ಸರಕಾರಿ ಶಾಲೆಯಲ್ಲಿ ವೀರ ಸಾವರ್ಕರ್ ‘ಜೈ’ ಕಾರ ವಿಚಾರ; ಸಿಡಿದೆದ್ದ ಹಿಂ.ಜಾ.ವೇ..!!


ಬoಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಮಂಚಿ ಸರಕಾರಿ ಶಾಲೆಯಲ್ಲಿ ಸ್ವಾತಂತ್ರ‍್ಯ ದಿನದಂದು ಧ್ವಜಾರೋಹಣದ ಸಂದರ್ಭ ಶಾಲಾ ಮಕ್ಕಳೊಂದಿಗೆ ಸರಕಾರಿ ಶಾಲಾ ಶಿಕ್ಷಕಿ ಸ್ವಾತಂತ್ರ್ಯ ಹೋರಾಟಗಾರರಿಗೆ ಘೋಷಣೆ ಹಾಕಿದ್ದಾರೆ .
ಈ ಪೈಕಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರಿಗೂ ಜೈಕಾರ ಹಾಕಿದ್ದಾರೆ. ಇದನ್ನು ಶಾಲಾ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಬಂದಿದ್ದ ಬಶೀರ್ ಎಂಬಾತ ವಿಡಿಯೋ ಮಾಡಿ, ವೈರಲ್ ಮಾಡಿದ್ದಾನೆ.


ಇದನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಶಾಲಾ ಮುಸ್ಲಿಂ ಪೋಷಕರು ಕೆಲವು ರಾಜಕಾರಣಿಗಳು, ಶಿಕ್ಷಕಿಗೆ ಒತ್ತಡ ತಂದು, ಶಿಕ್ಷಕಿ ಕ್ಷಮೆಯಾಚಿಸುವಂತೆ ಮಾಡಿದ್ದಾರೆ.
ಈ ಪ್ರಕರಣವನ್ನು ಹಿಂದು ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲೆ ವಿಟ್ಲ ತಾಲೂಕು ತೀವ್ರವಾಗಿ ಖಂಡಿಸಿದ್ದು, ಸರಕಾರಿ ಶಾಲೆಯಲ್ಲಿ ಪೋಷಕರ ನೆಪವಾಗಿಟ್ಟುಕೊಂಡು ಸರಕಾರಿ ಕೆಲಸಕ್ಕೆ ಅಡ್ಡಿ ಪಡಿಸಿದ ಮತಾಂಧರನ್ನು ಕೂಡಲೇ ಬಂಧಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಹಿಂ.ಜಾ.ವೇ ಎಚ್ಚರಿಕೆಯನ್ನು ನೀಡಿದೆ.

ಇನ್ನೂ ಶಾಲೆಯಲ್ಲಿ ನಡೆದ ಕಾರ್ಯಕ್ರಮ ಚಿತ್ರೀಕರಣ ಮಾಡಿ ವೈರಲ್ ಮಾಡಿರುವುದನ್ನು ಆಕ್ಷೇಪಿಸಿ, ಮುಖ್ಯ ಶಿಕ್ಷಕರು ಬಶೀರ್ ವಿರುದ್ಧ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!