ಜನ ಮನದ ನಾಡಿ ಮಿಡಿತ

Advertisement

8 ವರ್ಷಗಳ ಹಿಂದೆ ನೈಲ್ ಕಟ್ಟರ್ ನುಂಗಿದ್ದ ಭೂಪ..!

ಈತನ ಪರಿಸ್ಥಿತಿ ಈಗ ಹೇಗಿದೆ ಗೊತ್ತಾ..? ಎಂಥೆ೦ಥಾ ವಿಚಿತ್ರ ಮನುಷ್ಯರು ಇರ್ತಾರೆ ನೋಡಿ..

ವ್ಯಕ್ತಿಯೊಬ್ಬರು 8 ವರ್ಷಗಳ ಹಿಂದೆ ನುಂಗಿದ್ದ ನೈಲ್ ಕಟ್ಟರ್ ಅನ್ನು ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಮಣಿಪಾಲ್ ವೈದ್ಯರು ಹೊರ ತೆಗೆದಿದ್ದಾರೆ.

ಸರ್ಜಾಪುರದ 40 ವರ್ಷದ ನಿವಾಸಿಯೊಬ್ಬರು ಮದ್ಯಪಾನ ಅಮಲಿನಲ್ಲಿ ನೈಲ್ ಕಟ್ಟರ್ ಅನ್ನು 8 ವರ್ಷಗಳ ಹಿಂದೆ ನುಂಗಿದ್ದರು. ಇದನ್ನು ನುಂಗಿರುವುದೇ ವ್ಯಕ್ತಿ ಮರೆತು ಹೋಗಿದ್ದರು. ಮೊದ ಮೊದಲು ಇದು ಅಷ್ಟಾಗಿ ನೋವು ಕಾಣಿಸಿಕೊಂಡಿಲ್ಲ. ಆದ್ರೆ ಈಗೀಗ ಅದರ ನೋವು ವಿಪರೀತವಾಗಿತ್ತು. ಹೀಗಾಗಿ ಸ್ಥಳೀಯ ಕ್ಲಿನಿಕ್ಗೆ ದಾಖಲಾಗಿ ತಪಾಸಣೆ ಮಾಡಿಸಿಕೊಂಡಿದ್ದರು. ಆಗ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಏನೋ ಸಾಧನ ಇರುವುದು ಗೊತ್ತಾಗಿದೆ.ಇದರಿಂದ ಹೊಟ್ಟೆ ಒಳಗೆ ಏನೋ ಇದೆಯೆಂದು ಹೆಚ್ಚಿನ ಚಿಕಿತ್ಸೆ ಪಡೆಯಲು ವ್ಯಕ್ತಿ ತಕ್ಷಣ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಡಾ.U. ಲೋಹಿತ್ ನೇತೃತ್ವದ ವೈದ್ಯರ ತಂಡ ಲ್ಯಾಪ್ರೋಸ್ಕೋಫಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ನೈಲ್ ಕಟ್ಟರ್ ಅನ್ನು ಹೊರ ತೆಗೆದಿದ್ದಾರೆ. ಸದ್ಯ ಆರೋಗ್ಯವಾಗಿರುವ ವ್ಯಕ್ತಿಯು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!