ಯಕ್ಷಗಾನ ಒಂದು ಶ್ರೇಷ್ಠ ಕಲೆ, ಎಲ್ಲಾ ಪ್ರಕಾರದ ಕಲೆಗಳ ಸಮ್ಮಿಲನವೇ ಯಕ್ಷಗಾನ. ಇಂದು ಅದು ಜಾಗತಿಕ ಕಲೆಯಾಗಿ ಮೇಳೈಸುತ್ತಿದೆ ಎಂದು ಯಕ್ಷ ದ್ರುವ ಪಟ್ಲ ಫೌಂಡೇಷನ್ನ ಸ್ಪಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದ್ದಾರೆ.

ಇವರು ಯಕ್ಷ ದ್ರುವ – ಯಕ್ಷ ಶಿಕ್ಷಣ ಅಭಿಯಾನದಡಿ, ಶ್ರೀರಾಮ ಪ್ರೌಢ ಶಾಲೆ ಅರ್ಕುಳ ಫರಂಗಿಪೇಟೆಯಲ್ಲಿ ನಾಟ್ಯ ತರಬೇತಿ ಶಿಕ್ಷಣ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀರಾಮ ವಿದ್ಯಾ ಸಂಸ್ಥೆ ಅರ್ಕುಳ ಫರಂಗಿಪೇಟೆಯ ಶಾಲಾಡಳಿತ ಮಂಡಳಿ ಅಧ್ಯಕ್ಷರಾದ ಅರ್ಕುಳ ಬೀಡು ವಜ್ರನಾಭ ಶೆಟ್ಟಿ , ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎ ಕೆ ಜಯರಾಮ ಶೇಕ, ನಿವೃತ್ತ ಮುಖ್ಯ ಶಿಕ್ಷಕರಾದ ದೇವದಾಸ್ ಕೆ ಆರ್ , ರೋಟರಿ ಕ್ಲಬ್ ಫರಂಗಿಪೇಟೆಯ ಕೋಶಾಧಿಕಾರಿ ದಿನೇಶ್ ಶೆಟ್ಟಿ ಕೊಟ್ಟಿಂಜ, ಯಕ್ಷ ದ್ರುವ – ಯಕ್ಷ ಶಿಕ್ಷಣದ ಶಿಕ್ಷಕರಾದ ಅನ್ವೇಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶೈಲಜಾ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಜಯ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.













