ಜನ ಮನದ ನಾಡಿ ಮಿಡಿತ

Advertisement

7 ಮುದ್ದು ಪುಟಾಣಿ ಕಂದಮ್ಮಗಳಿಗೆ ರಾಕ್ಷಸಿಯಾದ ನರ್ಸ್..!

ನರ್ಸ್ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನವಜಾತ ಶಿಶುಗಳ ಪಾಲಿಗೆ ನರರಾಕ್ಷಸಿಯಾಗಿದ್ದಾಳೆ. ಏನೂ ಅರಿಯದ 7 ಮುಗ್ಧ ಕಂದಮ್ಮಗಳನ್ನ ಕೊಂದು ಸೀರಿಯಲ್ ಕಿಲ್ಲರ್ ಹಣೆಪಟ್ಟಿ ಕಟ್ಟಿಕೊಂಡಿದ್ದಾಳೆ.

ಈ ಮಕ್ಕಳ ಸೀರಿಯಲ್ ಕಿಲ್ಲರ್‌ಗೆ ಭಾರತ ಮೂಲದ ಸಿಬ್ಬಂದಿಯೂ ಒಬ್ಬರು ಸಾಥ್ ನೀಡಿರೋದು ಶಾಕ್ ಉಂಟುಮಾಡಿದೆ. ಇoಗ್ಲೆoಡ್‌ನ ಆಸ್ಪತ್ರೆಯೊಂದರ ಹೆರಿಗೆ ವಾರ್ಡ್ನಲ್ಲಿ ಈ ಲೂಸಿ ಲೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಳು. ಈ ವೇಳೆ ಹಲವು ಗರ್ಭಿಣಿಯರಿಗೆ ಹೆರಿಗೆ ಮಾಡಿಸುವ ಕೆಲಸವನ್ನು ಈ ಲೂಸಿ ಮಾಡುತ್ತಿದ್ದಳು. ಆದರೆ ಆ ಮೇಲೆ ಈಕೆಗೆ ಅದೇನಾಗ್ತಿತ್ತೋ ಗೊತ್ತಿಲ್ಲ. ಬಾಣಂತಿಯರು ಮಗುವನ್ನು ಬಿಟ್ಟು ಶೌಚಾಲಯಕ್ಕೆ ಹೋದಾಗ ಯಾರಿಗೂ ತಿಳಿಯಂದoತೆ ಕೊಲೆ ಮಾಡುತ್ತಿದ್ದಳು. ಹೀಗೆ ಈ ಲೂಸಿ ಲೆಟ್ಟಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ನವಜಾತ ಶಿಶುಗಳನ್ನ ಹತ್ಯೆಮಾಡಿದ್ದಳು. ಸಿರಿಯಲ್ ಮಕ್ಕಳ ಕಿಲ್ಲರ್ ಆಗಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಳಿ ಬದುಕಬೇಕಿದ್ದ 7 ಮಕ್ಕಳ ಜೀವವನ್ನು ಕಿತ್ತುಕೊಂಡ ಲೂಸಿ ಲೆಟ್ಟಿ ಎಂಬ ರಾಕ್ಷಸಿಗೆ ಲಂಡನ್‌ನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸುತ್ತಿದ್ದಂತೆ ಇಂಗ್ಲೆoಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.. ಅಲ್ಲದೇ ಪೊಲೀಸರ ವಿಚಾರಣೆ ವೇಳೆ ಲೂಸಿ ಇನ್ನೂ ಹಲವರ ಹತ್ಯೆಗೆ ಪ್ರಯತ್ನಿಸಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಮಾತ್ರವಲ್ಲದೇ ಈಕೆ ಇನ್ನೂ 6 ಮಕ್ಕಳ ಹತ್ಯೆಗೆ ಸಂಚು ರೂಪಿಸಿದ್ದು ಪೋಷಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.ಒಟ್ಟಿನಲ್ಲಿ ನವಜಾತ ಶಿಶುಗಳ ಪಾಲಿಗೆ ಎರಡನೇ ತಾಯಾಗಿ ಆಸ್ಪತ್ರೆ ವಾರ್ಡ್ನಲ್ಲಿ ಮಮತೆ ನೀಡಬೇಕಿದ್ದ ಓರ್ವ ನರ್ಸ್ ನಡೆಸಿರೋ ಕೃತ್ಯ 7 ತಾಯಂದಿರ ಕಣ್ಣೀರಿಗೆ ಕಾರಣವಾಗಿದೆ. ಈ ಘಟನೆ ಬಳಿಕ ಯಾರನ್ನ ನಂಬಬೇಕು ಯಾರನ್ನ ನಂಬಬಾರದು ಅನ್ನೋ ಯಕ್ಷ ಪ್ರಶ್ನೆಯಾಗಿದೆ.

Leave a Reply

Your email address will not be published. Required fields are marked *

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

error: Content is protected !!