ಜನ ಮನದ ನಾಡಿ ಮಿಡಿತ

Advertisement

7 ಮುದ್ದು ಪುಟಾಣಿ ಕಂದಮ್ಮಗಳಿಗೆ ರಾಕ್ಷಸಿಯಾದ ನರ್ಸ್..!

ನರ್ಸ್ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನವಜಾತ ಶಿಶುಗಳ ಪಾಲಿಗೆ ನರರಾಕ್ಷಸಿಯಾಗಿದ್ದಾಳೆ. ಏನೂ ಅರಿಯದ 7 ಮುಗ್ಧ ಕಂದಮ್ಮಗಳನ್ನ ಕೊಂದು ಸೀರಿಯಲ್ ಕಿಲ್ಲರ್ ಹಣೆಪಟ್ಟಿ ಕಟ್ಟಿಕೊಂಡಿದ್ದಾಳೆ.

ಈ ಮಕ್ಕಳ ಸೀರಿಯಲ್ ಕಿಲ್ಲರ್‌ಗೆ ಭಾರತ ಮೂಲದ ಸಿಬ್ಬಂದಿಯೂ ಒಬ್ಬರು ಸಾಥ್ ನೀಡಿರೋದು ಶಾಕ್ ಉಂಟುಮಾಡಿದೆ. ಇoಗ್ಲೆoಡ್‌ನ ಆಸ್ಪತ್ರೆಯೊಂದರ ಹೆರಿಗೆ ವಾರ್ಡ್ನಲ್ಲಿ ಈ ಲೂಸಿ ಲೆಟ್ಟಿ ಕಾರ್ಯ ನಿರ್ವಹಿಸುತ್ತಿದ್ದಳು. ಈ ವೇಳೆ ಹಲವು ಗರ್ಭಿಣಿಯರಿಗೆ ಹೆರಿಗೆ ಮಾಡಿಸುವ ಕೆಲಸವನ್ನು ಈ ಲೂಸಿ ಮಾಡುತ್ತಿದ್ದಳು. ಆದರೆ ಆ ಮೇಲೆ ಈಕೆಗೆ ಅದೇನಾಗ್ತಿತ್ತೋ ಗೊತ್ತಿಲ್ಲ. ಬಾಣಂತಿಯರು ಮಗುವನ್ನು ಬಿಟ್ಟು ಶೌಚಾಲಯಕ್ಕೆ ಹೋದಾಗ ಯಾರಿಗೂ ತಿಳಿಯಂದoತೆ ಕೊಲೆ ಮಾಡುತ್ತಿದ್ದಳು. ಹೀಗೆ ಈ ಲೂಸಿ ಲೆಟ್ಟಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ನವಜಾತ ಶಿಶುಗಳನ್ನ ಹತ್ಯೆಮಾಡಿದ್ದಳು. ಸಿರಿಯಲ್ ಮಕ್ಕಳ ಕಿಲ್ಲರ್ ಆಗಿ ಎಲ್ಲರಿಗೂ ಶಾಕ್ ನೀಡಿದ್ದಾಳೆ. ಬಾಳಿ ಬದುಕಬೇಕಿದ್ದ 7 ಮಕ್ಕಳ ಜೀವವನ್ನು ಕಿತ್ತುಕೊಂಡ ಲೂಸಿ ಲೆಟ್ಟಿ ಎಂಬ ರಾಕ್ಷಸಿಗೆ ಲಂಡನ್‌ನ ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಕೋರ್ಟ್ ಈ ಬಗ್ಗೆ ತೀರ್ಪು ಪ್ರಕಟಿಸುತ್ತಿದ್ದಂತೆ ಇಂಗ್ಲೆoಡ್ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.. ಅಲ್ಲದೇ ಪೊಲೀಸರ ವಿಚಾರಣೆ ವೇಳೆ ಲೂಸಿ ಇನ್ನೂ ಹಲವರ ಹತ್ಯೆಗೆ ಪ್ರಯತ್ನಿಸಿದ್ದಾಗಿ ಬಾಯ್ಬಿಟ್ಟಿದ್ದಾಳೆ. ಮಾತ್ರವಲ್ಲದೇ ಈಕೆ ಇನ್ನೂ 6 ಮಕ್ಕಳ ಹತ್ಯೆಗೆ ಸಂಚು ರೂಪಿಸಿದ್ದು ಪೋಷಕರನ್ನ ಬೆಚ್ಚಿ ಬೀಳುವಂತೆ ಮಾಡಿದೆ.ಒಟ್ಟಿನಲ್ಲಿ ನವಜಾತ ಶಿಶುಗಳ ಪಾಲಿಗೆ ಎರಡನೇ ತಾಯಾಗಿ ಆಸ್ಪತ್ರೆ ವಾರ್ಡ್ನಲ್ಲಿ ಮಮತೆ ನೀಡಬೇಕಿದ್ದ ಓರ್ವ ನರ್ಸ್ ನಡೆಸಿರೋ ಕೃತ್ಯ 7 ತಾಯಂದಿರ ಕಣ್ಣೀರಿಗೆ ಕಾರಣವಾಗಿದೆ. ಈ ಘಟನೆ ಬಳಿಕ ಯಾರನ್ನ ನಂಬಬೇಕು ಯಾರನ್ನ ನಂಬಬಾರದು ಅನ್ನೋ ಯಕ್ಷ ಪ್ರಶ್ನೆಯಾಗಿದೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!