ಜನ ಮನದ ನಾಡಿ ಮಿಡಿತ

Advertisement

ಸಂಪಿಗೆ ಚರ್ಚ್ ನಲ್ಲಿ ರಕ್ತದಾನ ಶಿಬಿರ : 50 ಯುನಿಟ್ ರಕ್ತ ಸಂಗ್ರಹ

ಮೂಡುಬಿದಿರೆ: ಪವಿತ್ರಾತ್ಮ ದೇವಾಲಯ ಸಂಪಿಗೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಲನ ಘಟಕ, ಕ್ಯಾಥೋಲಿಕ್ ಸಭಾ ಸಂಪಿಗೆ ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ & ರೆಡ್ ಕ್ರಾಸ್ ಮಂಗಳೂರು ಇವುಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಸಂಪಿಗೆ ಚರ್ಚ್ ಸಭಾ ಭವನದಲ್ಲಿ ಭಾನುವಾರ ನಡೆಯಿತು.

ಸಂಪಿಗೆ ಹೋಲಿ ಸ್ಪಿರೀಟ್ ಚರ್ಚ್ನ ಧರ್ಮಗುರು ವಿನ್ಸೆಂಟ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿ ಶಿಬಿರವನ್ನು ಉದ್ಘಾಟಿಸಿ, ಇನ್ನೊಬ್ಬರ ಜೀವವನ್ನು ಉಳಿಸುವ ರಕ್ತವನ್ನು ದಾನ ಮಾಡುವುದು ಒಂದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.

ಮಂಗಳೂರು ಲೇಡಿಗೋಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ನಾಗಭೂಷಣ್, ಚರ್ಚ್ನ ಕಥೋಲಿಕ್ ಸಭಾದ ಅಧ್ಯಕ್ಷ ರಿಚಾರ್ಡ್ ಖರ್ಡೋಜಾ, ಪಾಲನಾ ಮಂಡಳಿಯ ಉಪಾಧ್ಯಕ್ಷ ವಿಲ್ಫ್ರೆಡ್ ಮಸ್ಕಿತ್, ಕಾರ್ಯದರ್ಶಿ ರೋಶನ್ ಫೆರ್ನಾಂಡಿಸ್, ಭಾರತೀಯ ಕಥೋಲಿಕ್ ಯುವ ಸಂಚಲನದ ಸಚೇತಕ ವಿಪಿನ್ ಕುಮಾರ್ ಫೆರ್ನಾಂಡಿಸ್, ಅಧ್ಯಕ್ಷ ಜೋಯ್ಸನ್ ಅಬ್ರೆವೋ, ಮೂಡುಬಿದಿರೆ ವಲಯ ಕಥೋಲಿಕ್ ಯುವ ಸಂಚಲನದ ಅಧ್ಯಕ್ಷ ಬ್ರೆಂಡನ್ ಕುಟಿನ್ಹಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇನ್ನೂ ರಕ್ತದಾನ ಶಿಬಿರದಲ್ಲಿ 50 ಯುನಿಟ್ ರಕ್ತ ಸಂಗ್ರಹವಾಗಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!