ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್‌ನಲ್ಲಿ ಜೆಸಿಬಿ ಬಳಸಿಕೊಂಡು ಕಳ್ಳತನಕ್ಕೆ ಯತ್ನಿಸಿದ ನಾಲ್ವರು ಕಳ್ಳರು ಪೊಲೀಸರ ವಶ..!


ಜೆಸಿಬಿ ಬಳಸಿಕೊಂಡು ಸುರತ್ಕಲ್‌ನ ರಾಜಶ್ರೀ ಕಟ್ಟಡದ ಎಟಿಎಂವೊoದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಶಿವಮೊಗ್ಗ ಮೂಲದ ದೇವರಾಜ್ (24), ಭರತ್ ಹೆಚ್ (20), ನಾಗರಾಜ ನಾಯ್ಕ್ (21) ಮತ್ತು ಧನರಾಜ್ ನಾಯ್ಕ್ (22) ಎಂದು ತಿಳಿದು ಬಂದಿದೆ.


ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೀರೋ ಸ್ಲೆಂಡರ್ ಬೈಕ್ ಹಾಗೂ 2 ಆಂಡ್ರೋಯ್ಡ್ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ನಾಲ್ವರು ಅಂತರ್ ಜಿಲ್ಲಾ ಕಲ್ಳರ ವಿರುದ್ಧ ಐಪಿಸಿ ಸೆಕ್ಷನ್ 457, 380, 511 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇವರಾಜ್ ನಾಯ್ಕ್ ಹಾಗೂ ನಾಗರಾಜ ನಾಯ್ಕ ವಿರುದ್ಧ ಶಿಕಾರಿಪುರ ಪಟ್ಟಣ ಹಾಗೂ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಿವೆ. ವಿಚಾರಣೆ ವೇಳೆ ಆಗಸ್ಟ್ 26 ರಂದು ಶಿವಮೊಗ್ಗದಲ್ಲಿ ವಿನೋಭಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೆಸಿಬಿ ಬಳಸಿ ಆಕ್ಸಿಸ್ ಬ್ಯಾಂಕಿನ ಎಟಿಎಂ ಒಡೆಯಲು ಯತ್ನಿಸಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಆರೋಪಿಗಳು ಆಗಸ್ಟ್ 4 ರ ಮಧ್ಯರಾತ್ರಿ ಪಡುಬಿದ್ರಿ-ಕಾರ್ಕಳ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಜೆಸಿಬಿ ಕದ್ದು, ಸುರತ್ಕಲ್‌ನಲ್ಲಿ ಎಟಿಎಂ ಕಳ್ಳತನ ಕೃತ್ಯಕ್ಕೆ ಯತ್ನಿಸಿದ್ದರು. ಆರೋಪಿಗಳ ಪೈಕಿ ಮೂವರಿಗೆ ಕೋರ್ಟ್ 4 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದ್ದು, ನಾಲ್ಕನೇ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!