ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಮನೆಯ ಆವರಣದ ಗೋಡೆಗೆ ಡಿಕ್ಕಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಅವರಣಗೋಡೆಗೆ ಗುದ್ದಿ ಚರಂಡಿಗೆ ವಾಲಿ ನಿಂತ ಘಟನೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಂಟ್ವಾಳ ಚೆಂಡ್ತಿಮಾರ್ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.


ಚೆಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಮನೆಯ ಕಾಂಪೌಂಡ್ ಗೆ ಗುದ್ದಿದ ಲಾರಿ ಅವರ ಮನೆಯ ಗೇಟಿಗೂ ಹಾನಿ ಮಾಡಿದೆ. ಸದ್ಯ ಮನೆಗೆ ಯಾವುದೇ ಅಪಾಯವಾಗಿಲ್ಲ.
ಮಧ್ಯ ರಾತ್ರಿ ಸುಮಾರು 1.30 ಗಂಟೆ ವೇಳೆ ದೊಡ್ಡ ಶಬ್ದವಾಗಿದ್ದು ಮನೆಯ ಯಜಮಾನ ಮೋನಪ್ಪ ಪೂಜಾರಿ ಅವರು ಹೊರಗಡೆ ಬಂದು ನೋಡಿದಾಗ ಲಾರಿ ಕಂಪೌಡ್ ಗೆ ಗುದ್ದಿ ಅಲ್ಲೆ ಪಕ್ಕಕ್ಕೆ ವಾಲಿ ನಿಂತಿತ್ತು.
ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಹೊರಕ್ಕೆ ಬಂದಿದ್ದ.


ಯಾವುದೇ ಸಾಮಾಗ್ರಿಗಳು ಇಲ್ಲದೆ ಖಾಲಿ ಲಾರಿ ಮಂಗಳೂರಿನಿಂದ ವಾಪಸು ಉಜಿರೆಗೆ ಹೋಗುವ ವೇಳೆ ನಿದ್ದೆಯ ಕಣ್ಣಿನಲ್ಲಿದ್ದ ಚಾಲಕನಿಗೆ ಲಾರಿ ನಿಯಂತ್ರಣಕ್ಕೆ ಸಿಗದೆ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ.
ಇದೇ ಮನೆಯ ಸಮೀಪದ ಮನೆಗೆ ಪಿಕಪ್ ವಾಹನವೊಂದು ಗುದ್ದಿ ಮನೆಗೆ ಹಾನಿಯಾಗಿದ್ದಲ್ಲದೆ ,ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಕೆಲ ತಿಂಗಳ ಹಿಂದೆ ನಡೆದಿತ್ತು.


ಈಗ ಮತ್ತೆ ಅದೇ ಭಾಗದಲ್ಲಿ ಮತ್ತೊಂದು ಘಟನೆ ನಡೆದಿದೆ ಆದರೆ ಯಾವುದೇ ಅಪಾಯವಾಗಿಲ್ಲ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!