ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಮನೆಯ ಆವರಣದ ಗೋಡೆಗೆ ಡಿಕ್ಕಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಅವರಣಗೋಡೆಗೆ ಗುದ್ದಿ ಚರಂಡಿಗೆ ವಾಲಿ ನಿಂತ ಘಟನೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಂಟ್ವಾಳ ಚೆಂಡ್ತಿಮಾರ್ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.


ಚೆಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಮನೆಯ ಕಾಂಪೌಂಡ್ ಗೆ ಗುದ್ದಿದ ಲಾರಿ ಅವರ ಮನೆಯ ಗೇಟಿಗೂ ಹಾನಿ ಮಾಡಿದೆ. ಸದ್ಯ ಮನೆಗೆ ಯಾವುದೇ ಅಪಾಯವಾಗಿಲ್ಲ.
ಮಧ್ಯ ರಾತ್ರಿ ಸುಮಾರು 1.30 ಗಂಟೆ ವೇಳೆ ದೊಡ್ಡ ಶಬ್ದವಾಗಿದ್ದು ಮನೆಯ ಯಜಮಾನ ಮೋನಪ್ಪ ಪೂಜಾರಿ ಅವರು ಹೊರಗಡೆ ಬಂದು ನೋಡಿದಾಗ ಲಾರಿ ಕಂಪೌಡ್ ಗೆ ಗುದ್ದಿ ಅಲ್ಲೆ ಪಕ್ಕಕ್ಕೆ ವಾಲಿ ನಿಂತಿತ್ತು.
ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಹೊರಕ್ಕೆ ಬಂದಿದ್ದ.


ಯಾವುದೇ ಸಾಮಾಗ್ರಿಗಳು ಇಲ್ಲದೆ ಖಾಲಿ ಲಾರಿ ಮಂಗಳೂರಿನಿಂದ ವಾಪಸು ಉಜಿರೆಗೆ ಹೋಗುವ ವೇಳೆ ನಿದ್ದೆಯ ಕಣ್ಣಿನಲ್ಲಿದ್ದ ಚಾಲಕನಿಗೆ ಲಾರಿ ನಿಯಂತ್ರಣಕ್ಕೆ ಸಿಗದೆ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ.
ಇದೇ ಮನೆಯ ಸಮೀಪದ ಮನೆಗೆ ಪಿಕಪ್ ವಾಹನವೊಂದು ಗುದ್ದಿ ಮನೆಗೆ ಹಾನಿಯಾಗಿದ್ದಲ್ಲದೆ ,ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಕೆಲ ತಿಂಗಳ ಹಿಂದೆ ನಡೆದಿತ್ತು.


ಈಗ ಮತ್ತೆ ಅದೇ ಭಾಗದಲ್ಲಿ ಮತ್ತೊಂದು ಘಟನೆ ನಡೆದಿದೆ ಆದರೆ ಯಾವುದೇ ಅಪಾಯವಾಗಿಲ್ಲ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!