ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಮನೆಯ ಆವರಣದ ಗೋಡೆಗೆ ಡಿಕ್ಕಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಮನೆಯ ಅವರಣಗೋಡೆಗೆ ಗುದ್ದಿ ಚರಂಡಿಗೆ ವಾಲಿ ನಿಂತ ಘಟನೆ ಬಿಸಿರೋಡು ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಬಂಟ್ವಾಳ ಚೆಂಡ್ತಿಮಾರ್ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ.


ಚೆಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಮನೆಯ ಕಾಂಪೌಂಡ್ ಗೆ ಗುದ್ದಿದ ಲಾರಿ ಅವರ ಮನೆಯ ಗೇಟಿಗೂ ಹಾನಿ ಮಾಡಿದೆ. ಸದ್ಯ ಮನೆಗೆ ಯಾವುದೇ ಅಪಾಯವಾಗಿಲ್ಲ.
ಮಧ್ಯ ರಾತ್ರಿ ಸುಮಾರು 1.30 ಗಂಟೆ ವೇಳೆ ದೊಡ್ಡ ಶಬ್ದವಾಗಿದ್ದು ಮನೆಯ ಯಜಮಾನ ಮೋನಪ್ಪ ಪೂಜಾರಿ ಅವರು ಹೊರಗಡೆ ಬಂದು ನೋಡಿದಾಗ ಲಾರಿ ಕಂಪೌಡ್ ಗೆ ಗುದ್ದಿ ಅಲ್ಲೆ ಪಕ್ಕಕ್ಕೆ ವಾಲಿ ನಿಂತಿತ್ತು.
ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಹೊರಕ್ಕೆ ಬಂದಿದ್ದ.


ಯಾವುದೇ ಸಾಮಾಗ್ರಿಗಳು ಇಲ್ಲದೆ ಖಾಲಿ ಲಾರಿ ಮಂಗಳೂರಿನಿಂದ ವಾಪಸು ಉಜಿರೆಗೆ ಹೋಗುವ ವೇಳೆ ನಿದ್ದೆಯ ಕಣ್ಣಿನಲ್ಲಿದ್ದ ಚಾಲಕನಿಗೆ ಲಾರಿ ನಿಯಂತ್ರಣಕ್ಕೆ ಸಿಗದೆ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ.
ಇದೇ ಮನೆಯ ಸಮೀಪದ ಮನೆಗೆ ಪಿಕಪ್ ವಾಹನವೊಂದು ಗುದ್ದಿ ಮನೆಗೆ ಹಾನಿಯಾಗಿದ್ದಲ್ಲದೆ ,ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ಕೆಲ ತಿಂಗಳ ಹಿಂದೆ ನಡೆದಿತ್ತು.


ಈಗ ಮತ್ತೆ ಅದೇ ಭಾಗದಲ್ಲಿ ಮತ್ತೊಂದು ಘಟನೆ ನಡೆದಿದೆ ಆದರೆ ಯಾವುದೇ ಅಪಾಯವಾಗಿಲ್ಲ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!