ಜನ ಮನದ ನಾಡಿ ಮಿಡಿತ

Advertisement

ಸುಳ್ಳು ಸುದ್ದಿ ಹಬ್ಬಿಸಿದರೆ ಹುಷಾರ್, ಮುಖ್ಯಮಂತ್ರಿ ಖಡಕ್ ವಾರ್ನಿಂಗ್

ದಕ್ಷಿಣ ಕನ್ನಡ: ರಾಜ್ಯದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು, ಸಮಾಜದ ಸ್ವಾಸ್ಥ್ಯ ಕೆಡಲು ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಸಮ್ಮತ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು.ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವವರ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.ಪ್ಯಾಕ್ಟ್ ಚೆಕ್ ಘಟಕವು , ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮುಖಾಂತರ ಸುಳ್ಳು ಸುದ್ದಿ ಪ್ರಸಾರವನ್ನ ಪತ್ತೆ ಹಚ್ಚಿ, ಪ್ರಸಾರ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್ , ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕ ರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!