ಜನ ಮನದ ನಾಡಿ ಮಿಡಿತ

Advertisement

2025ಕ್ಕೆ ಮಾನವ ಸಹಿತ ಗಗನಯಾನ ಸಾಧ್ಯವಾಗಲಿದೆ; ಇಸ್ರೋ ಮುಖ್ಯಸ್ಥ

2025ಕ್ಕೆ ಮಾನವ ಸಹಿತ ಗಗನಯಾನ ಸಾಧ್ಯವಾಗಲಿದೆ ಎಂದು ಇಸ್ರೋ ಮುಖ್ಯಸ್ಥ ಸೋಮನಾಥ್ ತಿಳಿಸಿದ್ದಾರೆ.

ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಮಾತನಾಡಿರುವ ಅವರು, ಚಂದ್ರನ ಅಂಗಳದಲ್ಲಿ ಇಳಿದಿರುವ ರೋವರ್ ಪ್ರಜ್ಞಾನ್​ನಲ್ಲಿ ರಸಾಯನಿಕ ಸಂಯೋಜನೆ ಅಧ್ಯಯನಕ್ಕೆ ಸಂಬಂಧಿಸಿದ ಎರಡು ಉಪಕರಣಗಳಿವೆ. ಚಂದ್ರನ ಮೇಲ್ಮೈ ಮೇಲೆ ರಸಾಯನಿಕ ಸಂಯೋಜನೆ ಬಗ್ಗೆ ಅಧ್ಯಯನ ಮಾಡಲಿದೆ. ಚಂದ್ರನ ಮೇಲ್ಮೈ ಮೇಲೆ ರೋವರ್ ಸಂಚಾರ ನಡೆಯಲಿದೆ. ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಮಿಷನ್ ಸೆಪ್ಟೆಂಬರ್​ನಲ್ಲಿ ಉಡಾವಣೆ ಆಗಲಿದೆ. ಗಗನಯಾನದ ಕೆಲಸ ಇನ್ನೂ ನಡೆಯುತ್ತಿದೆ. ಮಾನವ ಸಹಿತ ಗಗನಯಾನ 2025 ಕ್ಕೆ ಸಾಧ್ಯವಾಗಲಿದೆ ಎಂದರು.

ಇನ್ನು ಚಂದ್ರಯಾನ-3 ಬಗ್ಗೆ ಮಾತನಾಡಿ, ನಾವು ಚಂದ್ರನ ದಕ್ಷಿಣ ದ್ರುವದ ಹತ್ತಿರಕ್ಕೆ ಹೋಗಿದ್ದೇವೆ. ದಕ್ಷಿಣ ಧ್ರುವ ಬಹುತೇಕ 70 ಡಿಗ್ರಿಯಲ್ಲಿದೆ. ದಕ್ಷಿಣ ಧ್ರುವದಲ್ಲಿ ಕೆಲವೊಂದು ಅನುಕೂಲಗಳಿವೆ. ಸೂರ್ಯನ ಬೆಳಕು ಕಡಿಮೆ ಬೀಳುತ್ತದೆ. ದಕ್ಷಿಣ ಧ್ರುವದಲ್ಲಿ ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಅಂಶಗಳಿವೆ. ಚಂದ್ರನ ಬಗ್ಗೆ ಅಧ್ಯಯನ ಮಾಡುವ ವಿಜ್ಞಾನಿಗಳು ದಕ್ಷಿಣ ಧ್ರುವದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!