ಜನ ಮನದ ನಾಡಿ ಮಿಡಿತ

Advertisement

ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣ;ಇಬ್ಬರ ಬಂಧನ

ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ. ಕೃಷಿ ಕೆಲಸ ಮಾಡಿಕೊಂಡಿದ್ದವರು ಪ್ರತಿಮೆ ಧ್ವಂಸ ಮಾಡಿದ ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ. ತಾಂತ್ರಿಕ ಹಾಗೂ ಸ್ಥಳೀಯ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿಮೆ ಮರು ಸ್ಥಾಪನೆ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!