ಮoಗಳೂರು ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣವನ್ನು ಎಸ್ ಐ ಟಿ ತನಿಖೆಗೆ ನೀಡುವಂತೆ ಆಗ್ರಹಿಸಿ, ಇದೇ ಬರುವ ಆಗಸ್ಟ್ 28 ರಂದು ಚಲೋ ಬೆಳ್ತಂಗಡಿ ಮಹಾಧರಣಿ ನಡೆಸಲು ಜನಪರ ಸಂಘಟನೆ ಕರೆ ನೀಡಿದೆ. ಈ ಹಿನ್ನಲೆ ಇಂದು ಮಂಗಳೂರಿನಲ್ಲಿ ಸಮಾನ ಮನಸ್ಕ ಸಂಘಟನೆ ಹಾಗೂ ಡಿ.ವೈ.ಎಫ್.ಐ ಜಿಲ್ಲಾ ಸಮಿತಿ ವತಿಯಿಂದ ಪಾದಯಾತ್ರೆ ನಡೆಯಿತು. ಇನ್ನೂ ಈ ಪಾದಯಾತ್ರೆಯಲ್ಲಿ ನೂರಾರು ಹೋರಾಟಗಾರರು ಭಾಗವಹಿಸಿದ್ದರು.







