ಜನ ಮನದ ನಾಡಿ ಮಿಡಿತ

Advertisement

ಪ್ರಧಾನಿ ಮೋದಿ ನೋಡಲು ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಚಿವರು; ಕಾಂಗ್ರೆಸ್​ ಗೇಲಿ..!!

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ್ದರು. ಗ್ರೀಸ್​​ನಿಂದ ನೇರವಾಗಿ ಹೆಚ್​​ಎಎಲ್​ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಪ್ರಧಾನಿ, ರಸ್ತೆ ಮಾರ್ಗದ ಮೂಲಕ ಪೀಣ್ಯ ಬಳಿಯಿರುವ ಇಸ್ರೋಗೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಮೋದಿಯನ್ನು ಸ್ವಾಗತಿಸಲು ರಸ್ತೆ ಬದಿಯಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ನಿಂತಿದ್ದರು. ರಸ್ತೆಯ ಬ್ಯಾರಿಕೇಡ್​ ಹಿಂದೆ ನಾಯಕರು ನಿಂತಿರೋ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ, ಬಿಜೆಪಿಯನ್ನು ಕಾಂಗ್ರೆಸ್​ ನಾಯಕರು ಗೇಲಿ ಮಾಡಿದ್ದಾರೆ.

Image

ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ, ಮಾಜಿ ಎಂಎಲ್‌ಸಿ ರಮೇಶ್ ಬಾಬು ಟ್ವೀಟ್ ಮಾಡಿ, ಇಂಥ ದುರಂತವನ್ನು ನೀವು ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ನೋಡಲು ಸಾಧ್ಯ. ಮೋದಿ ಭೇಟಿ ವೇಳೆ ರಾಜ್ಯ ಬಿಜೆಪಿ ನಾಯಕರನ್ನು ನಾಯಿಗಿಂತ ಕಡೆಯಾಗಿ ನೋಡಲಾಗಿದೆ. ಬಿಜೆಪಿ ಆರ್​ಎಸ್​ಎಸ್​ನಲ್ಲಿ ಆತ್ಮಾಭಿಮಾನ ಸಂಸ್ಕೃತಿ ಕಳೆದು ಹೋಗಿದೆ, ಜೈ ಮೋದಿ ಎಂದು ಅಪಹಾಸ್ಯ ಮಾಡಿದ್ದಾರೆ

ಕರ್ನಾಟಕ ಕಾಂಗ್ರೆಸ್​ ಟ್ವೀಟ್ ಮಾಡಿ, ಬಿಜೆಪಿ ನಾಯಕರದ್ದು ಎಂತಹ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಟ್ವಿಟ್ ಮಾಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಶ್ರೀ ಪರಮಾನಂದ ಸಾಲ್ಯಾನ್ ಅವರಿಗೆ ಈ ವರ್ಷದ ರಂಗಭಾಸ್ಕರ ಪ್ರಶಸ್ತಿ..!

ಉಳ್ಳಾಲ: ಆಹಾರ ಅರಸಿ ಬಂದ ನವಿಲಿಗೆ ವಿದ್ಯುತ್ ಕಂಬವೇ ಮರಣಬಲೆ….!

ಬಂಟ್ವಾಳ: ಮಂಚಿ – ಕೊಳ್ನಾಡು ಪ್ರೌಢಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಉದ್ಘಾಟನೆ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿ….!

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

error: Content is protected !!