ಜನ ಮನದ ನಾಡಿ ಮಿಡಿತ

Advertisement

ಅಪರೂಪದ ಮೂಳೆ ಮಜ್ಜೆ ಕಸಿ ಯಶಸ್ವಿ;ಮೊದಲ ಪ್ರಕರಣ 

ಸಿವಿಯರ್‌ ಕಂಬೈನ್ಡ್ ಇಮ್ಯುನೊಡಿಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆಯಿಂದ ಬಳಲುತ್ತಿರುವ ಮಗುವಿಗೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರ ತಂಡವು ಯಶಸ್ವಿ ಗ್ರಾಫ್ಟ್ ಮ್ಯಾನಿಪುಲೇಟೆಡ್‌ ಅರ್ಧ- ಹೊಂದಾಣಿಕೆಯ ಅಸ್ಥಿ ಮಜ್ಜೆ ಕಸಿ ನಡೆಸಿದೆ. ಇದು ಕರಾವಳಿ ಕರ್ನಾಟಕದಲ್ಲಿ ಮೊದಲ ಪ್ರಕರಣವಾಗಿದೆ.

ಅಪರೂಪದ ರಕ್ತದ ಕಾಯಿಲೆಯಿಂದ ಬಳಲುತ್ತಿರುವ ಮಗುವನ್ನು ಉಳಿಸಲು ಆಸ್ಪತ್ರೆಯ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ವೈದ್ಯರ ತಂಡವು ವಿಶಿಷ್ಟವಾದ ಅಸ್ಥಿಮಜ್ಜೆಯ ಕಸಿ ಮಾಡಲು ನಿರ್ಧರಿಸಿತ್ತು.

ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಅರ್ಚನಾ ಎಂ.ವಿ. ಮಾತನಾಡಿ, “ರೋಗಿಯು ಮಾರಣಾಂತಿಕ ಕ್ಷಯರೋಗದ ಸೋಂಕಿನಿಂದ ಬಳಲುತ್ತಿದ್ದ ಕಾರಣ ಕೀಮೋಥೆರಪಿ ಮತ್ತು ಇಮ್ಯುನೊಸಪ್ರಸಿವ್‌ ಔಷಧಗಳನ್ನು ಬಳಸಲಾಗಲಿಲ್ಲ. ಅಂತಹ ಔಷಧಗಳನ್ನು ತಪ್ಪಿಸಲು, ಟಿಸಿಆರ್‌ ಆಲ್ಫಾ ಬೀಟಾ ಡಿಪ್ಲೀಷನ್‌ ಎಂದು ಕರೆಯಲ್ಪಡುವ ಸ್ಟೆಮ್‌ ಸೆಲ್‌ ಗ್ರಾಫ್ಟ್ ಮ್ಯಾನಿಪ್ಯುಲೇಶನ್‌ ತಂತ್ರಜ್ಞಾನವನ್ನು ಬಳಸಲಾಯಿತು ಎಂದರು.

ಮಗುವಿಗೆ ಮೂಳೆ ಮಜ್ಜೆಯ ಕಸಿ ನಡೆಸಿ, 6 ವಾರಗಳ ಅನಂತರ ಸ್ಥಿರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಗುವು ರೋಗ ಮತ್ತು ಸೋಂಕಿನಿಂದ ಮುಕ್ತವಾಗಿ, ಆರೋಗ್ಯಕರ ಜೀವನ ನಡೆಸುವಂತಾಗಿದೆ ಎಂದರು.

ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ| ವಾಸುದೇವ ಭಟ್‌ ಕೆ. ಮಾಹಿತಿ ನೀಡಿ, ರಾಜ್ಯದ ಕರಾವಳಿ ಪ್ರದೇಶದಲ್ಲಿ ಯಶಸ್ವಿ ಟಿ ಸೆಲ್‌-ಡಿಪ್ಲೀಟೆಡ್‌ ಹ್ಯಾಪ್ಲೋಡೆಂಟಿಕಲ್‌ ಬೋನ್‌ ಮ್ಯಾರೋ ಟ್ರಾನ್ಸ್‌ಪ್ಲಾಂಟ್‌ಗೆ ಒಳಗಾದ ಮೊದಲ ಪ್ರಕರಣ ಇದು ಎಂದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!