ಜನ ಮನದ ನಾಡಿ ಮಿಡಿತ

Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉಮ್ಮರ್ ಫಾರೂಕ್ ಬಂಧನ

ಬಂಟ್ವಾಳ: ಕೊಲೆ ಯತ್ನ,ದರೋಡೆ, ಕಳ್ಳತನ ಸಹಿತ ವಿವಿಧ ಪ್ರಕರಣಗಳಲ್ಲಿ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು,ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣಾ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ನಡೆದಿದೆ.


ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಇಬ್ರಾಹಿಂ ಅವರ ಮಗ ಉಮ್ಮರ್ ಫಾರೂಕ್ ಬಂಧಿತ ಆರೋಪಿ.
ಸುಮಾರು 17 ಪ್ರಕರಣಗಳಲ್ಲಿ ಉಮ್ಮರ್ ಫಾರೂಕ್ ಅವರು ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.


ಈತ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ,ಕೋಣಾಜೆ,ಬರ್ಕೆ,ವಿಟ್ಲ,ಕಡಬ ಹೀಗೆ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಈತನ ವಿರುದ್ದ ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.


ಇಂದು ಬೆಳಿಗ್ಗೆ ಈತ ಮಾಣಿ ಪರಿಸರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ ಪೋಲೀಸರು ಈತನ ಬಂಧನಕ್ಕೆ ಬಲೆಬೀಸಿದ್ದರು.


ನಗರ ಠಾ಼ಣಾ ಎಸ್.ಐ.ರಾಮಕೃಷ್ಣ ನೇತ್ರತ್ವದಲ್ಲಿ ಪೋಲೀಸ್ ಸಿಬ್ಬಂದಿಗಳಾದ ಗಣೇಶ್,ಮೋಹನ್ ಅವರು ಕಾರ್ಯಚರಣೆ ನಡೆಸಿ ಮಾಣಿಯಲ್ಲಿ ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!