ಜನ ಮನದ ನಾಡಿ ಮಿಡಿತ

Advertisement

ಕೊಯಿಲ ಸರಕಾರಿ ಪ್ರೌಢಶಾಲೆ; ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ


ಬಂಟ್ವಾಳ: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಅವರ ಆಶಯದಂತೆ ಯಕ್ಷಧ್ರುವಯಕ್ಷ ಶಿಕ್ಷಣ” ಅಭಿಯಾನದಡಿಯಲ್ಲಿ ಇಂದು ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷ ತರಬೇತಿಯ ಉದ್ಘಾಟನೆ ನಡೆಯಿತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದರಾದ ಸರಪಾಡಿ ಅಶೋಕ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು ಅವರು ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಹಿಲಾರಿ ಡಿಸೋಜ, ರಂಗಭೂಮಿ ಕಲಾವಿದ ರತ್ನದೇವ್ ಪುಂಜಾಲಕಟ್ಟೆ,ಶಿಕ್ಷಕರಾದ ಧನಂಜಯ, ಜ್ಯೋತಿ, ಆಶಾಲತಾ, ಪ್ರಶ್ಮಿತ, ಸುಶ್ಮಿತ ಅವರು ಉಪಸ್ಥಿತರಿದ್ದರು. ಯಕ್ಷ ಗುರು ಪ್ರೇಮರಾಜ್ ಕೊಯಿಲ ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಗತಿ ಪ್ರಾರಂಭಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸೌಮ್ಯಾ ಎಚ್. ಸ್ವಾಗತಿಸಿದರು.‌
ಸಹ ಶಿಕ್ಷಕರಾದ ಪ್ರವೀಣ್ ಕಾಮತ್ ವಂದಿಸಿದರು. ರಮೇಶ್ ಮಯ್ಯ ಕಾರ್ಯಕ್ರಮ‌ ನಿರೂಪಿಸಿದರು. 83 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!