ಜನ ಮನದ ನಾಡಿ ಮಿಡಿತ

Advertisement

ವಾಮದಪದವು : ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ, ನ್ಯಾಯಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನಾ ಸಭೆ, ಪಾದಯಾತ್ರೆ


ಬಂಟ್ವಾಳ : ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಿ ಸೂಕ್ತ ನ್ಯಾಯ ಒದಗಿಸಲು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ವಾಮದಪದವು ಸಮಾನ ಮನಸ್ಕರ ಸೌಜನ್ಯ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಸಭೆ ಮಾವಿನಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ಜರಗಿತು.
ಸೌಜನ್ಯಾ ಸಹೋದರಿ ಸೌಹಾರ್ಧಾ ಮತ್ತು ತಾಯಿ ಕುಸುಮಾವತಿ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.


ಜಾನಪದ ವಿದ್ವಾಂಸ, ಸಾಮಾಜಿಕ ಕಾರ್ಯಕರ್ತ ತಮ್ಮಣ್ಣ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ತುಳುನಾಡು ಸತ್ಯ, ಧರ್ಮ, ನ್ಯಾಯದ ಬೀಡು. ತುಳುನಾಡಿನ ದೈವಶಕ್ತಿಗಳು ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ನೀಡುವುದು ಖಂಡಿತ. ಅಪರಾಧಿಗಳಿಗೆ ಸ್ತ್ರೀ ಶಾಪ ತಟ್ಟುವುದು ಎಂದರು. ಬೆಳ್ತಂಗಡಿ ಪ್ರಜಾಪ್ರಭುತ್ವ ವೇದಿಕೆಯ ಅನಿಲ್‌ಕುಮಾರ್ ಮಾತನಾಡಿ, ಸೌಜನ್ಯಾ ಪ್ರಕರಣದಲ್ಲಿ ತನಿಖಾಧಿಕಾರಿಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಪ್ರಜಾಪ್ರಭುತ್ವ ದೇಶದಲ್ಲಿ ನ್ಯಾಯ ದೊರಕದಿರುವುದು ವಿಪರ್ಯಾಸ ಎಂದರು.


ಸೌಜನ್ಯಾ ತಾಯಿ ಕುಸುಮಾವತಿ ಅವರು ಮಾತನಾಡಿ, ನನ್ನ ಮಗಳಿಗಾದ ಅನ್ಯಾದ ವಿರುದ್ಧ ಕಳೆದ ೧೧ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇನೆ. ನಮಗೆ ನ್ಯಾಯ ಒದಗಿಸಲು ಸಹಕರಿಸಿ ಎಂದರು.
ಹೋರಾಟ ಸಮಿತಿ ಸಂಚಾಲಕ ದೇವೀಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಸೌಜನ್ಯಾ ಪರ ಪ್ರತೀ ಗ್ರಾಮಗಳಲ್ಲಿ ಹೋರಾಟ ನಡೆಯಬೇಕು. ಆ ಮೂಲಕ ನ್ಯಾಯ ದೊರಕಿಸಿಕೊಡಬೇಕು ಎಂದರು.
ಈ ಸಂದರ್ಭದಲ್ಲಿ ಸೌಜನ್ಯಾ ತಾಯಿ ಮತ್ತು ಕುಟುಂಬ ಹಾಗೂ ಪ್ರತಿಭಟನಕಾರರು ಸೌಜನ್ಯಾ ಅತ್ಯಾಚಾರಿ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಒದಗಿಸುವಂತೆ ಕೋರಿ ಸಭೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು.ಸೌಜನ್ಯಾ ಕುರಿತ ಹಾಡನ್ನು ಪಂಚಮಿ ಹಾಡಿದರು.


ಹೋರಾಟ ಸಮಿತಿಯ ಯತೀಶ್ ಶೆಟ್ಟಿ ವಿಜಯನಗರ ಅವರು ಸ್ವಾಗತಿಸಿದರು. ಭರತ್ ಕಾವು ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮಕ್ಕೆ ಮುನ್ನ ವಾಮದಪದವು ನೀಲಿ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಮಾವಿನಕಟ್ಟೆ ಮೈದಾನದವರೆಗೆ ಘೋಷಣೆಗಳೊಂದಿಗೆ ಪ್ರತಿಭಟನಕಾರರು ಪಾದಯಾತ್ರೆ ನಡೆಸಿದರು. ಬಂಟ್ವಾಳ ತಹಶೀಲ್ದಾರ್ ಎಸ್.ಬಿ. ಕೂಡಲಗಿ, ಪುಂಜಾಲಕಟ್ಟೆ ಮತ್ತು ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾನೂನು ಸುವ್ಯವಸ್ಥೆಗೆ ಸಹಕರಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!