ಜನ ಮನದ ನಾಡಿ ಮಿಡಿತ

Advertisement

ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವ; 100 ರೂಪಾಯಿಯ ವಿಶೇಷ ನಾಣ್ಯ ಬಿಡುಗಡೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ದಿಗ್ಗಜ ನಟ, ತೆಲುಗು ದೇಶಂ ಸಂಸ್ಥಾಪಕ ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವಕ್ಕಾಗಿ 100 ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲಾಗಿದೆ.

ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 100ರ ನಾಣ್ಯ ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ನಂದಮೂರಿ ಬಾಲಕೃಷ್ಣ, ರಾಮಕೃಷ್ಣ, ಭುವನೇಶ್ವರಿ, ಪುರಂದರೇಶ್ವರಿ ಸೇರಿದಂತೆ ಎನ್‌ಟಿ ರಾಮರಾವ್ ಅವರ ಪುತ್ರರು ಮತ್ತು ಪುತ್ರಿಯರು ಸೇರಿ ಕುಟುಂಬದ ಇತರ ಸದಸ್ಯರೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಟಿಡಿಪಿ ಅಧ್ಯಕ್ಷ ನಾರಾ ಚಂದ್ರಬಾಬು ನಾಯ್ಡು ಕೂಡ ಭಾಗಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರು ಮತ್ತು ಹಲವು ಟಿಡಿಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಎನ್​ಟಿಆರ್​ ಸ್ಮರಣಾರ್ಥ ಹೈದರಾಬಾದ್​​ನಲ್ಲಿರುವ ಭಾರತ ಸರ್ಕಾರದ ಟಂಕಸಾಲೆಯಲ್ಲಿ ಮುದ್ರಿಸಲಾಯಿತು. ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಮುದ್ರಿಸಲಾಗಿದೆ.

ಅಂದಹಾಗೆಯೇ, 100 ರೂಪಾಯಿ ವಿಶೇಷ ನಾಣ್ಯವನ್ನು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲು ಮುದ್ರಿಸಿಲ್ಲ. ಎನ್​ಟಿಆರ್​​ ಅವರಿಗೆ ಗೌರವ ಸೂಚಿಸುವ ಸಲುವಾಗಿ ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!