ಜನ ಮನದ ನಾಡಿ ಮಿಡಿತ

Advertisement

ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವ; 100 ರೂಪಾಯಿಯ ವಿಶೇಷ ನಾಣ್ಯ ಬಿಡುಗಡೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ದಿಗ್ಗಜ ನಟ, ತೆಲುಗು ದೇಶಂ ಸಂಸ್ಥಾಪಕ ದಿವಂಗತ ಎನ್.ಟಿ. ರಾಮರಾವ್ ಅವರ 100ನೇ ಜನ್ಮ ಶತಮಾನೋತ್ಸವಕ್ಕಾಗಿ 100 ರೂಪಾಯಿ ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಲಾಗಿದೆ.

ನವದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 100ರ ನಾಣ್ಯ ಬಿಡುಗಡೆಗೊಳಿಸಿದರು.

ಸಮಾರಂಭದಲ್ಲಿ ನಂದಮೂರಿ ಬಾಲಕೃಷ್ಣ, ರಾಮಕೃಷ್ಣ, ಭುವನೇಶ್ವರಿ, ಪುರಂದರೇಶ್ವರಿ ಸೇರಿದಂತೆ ಎನ್‌ಟಿ ರಾಮರಾವ್ ಅವರ ಪುತ್ರರು ಮತ್ತು ಪುತ್ರಿಯರು ಸೇರಿ ಕುಟುಂಬದ ಇತರ ಸದಸ್ಯರೂ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಟಿಡಿಪಿ ಅಧ್ಯಕ್ಷ ನಾರಾ ಚಂದ್ರಬಾಬು ನಾಯ್ಡು ಕೂಡ ಭಾಗಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರು ಮತ್ತು ಹಲವು ಟಿಡಿಪಿ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇನ್ನು ಎನ್​ಟಿಆರ್​ ಸ್ಮರಣಾರ್ಥ ಹೈದರಾಬಾದ್​​ನಲ್ಲಿರುವ ಭಾರತ ಸರ್ಕಾರದ ಟಂಕಸಾಲೆಯಲ್ಲಿ ಮುದ್ರಿಸಲಾಯಿತು. ಕೇಂದ್ರ ಹಣಕಾಸು ಸಚಿವಾಲಯದ ನಿರ್ದೇಶನದ ಮೇರೆಗೆ ಮುದ್ರಿಸಲಾಗಿದೆ.

ಅಂದಹಾಗೆಯೇ, 100 ರೂಪಾಯಿ ವಿಶೇಷ ನಾಣ್ಯವನ್ನು ಮಾರುಕಟ್ಟೆಯಲ್ಲಿ ವಹಿವಾಟು ನಡೆಸಲು ಮುದ್ರಿಸಿಲ್ಲ. ಎನ್​ಟಿಆರ್​​ ಅವರಿಗೆ ಗೌರವ ಸೂಚಿಸುವ ಸಲುವಾಗಿ ಬಿಡುಗಡೆ ಮಾಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!