ಜನ ಮನದ ನಾಡಿ ಮಿಡಿತ

Advertisement

ದ್ವಿಚಕ್ರ ,ತ್ರಿಚಕ್ರ ವಾಹನಗಳ ಬಿಡಿಭಾಗಗಳ ದಾಸ್ತಾನು ಹಾಗೂ ವ್ಯಾಪಾರ ಮಳಿಗೆಯಿಂದ 39,370 ರೂ. ನಗದು, 4 ಮೊಬೈಲ್ ಫೋನ್ ಕಳವು

ಮಂಗಳೂರು; ಬಂದರ್‌ನ ಅಜೀಜುದ್ದೀನ್ ರಸ್ತೆಯಲ್ಲಿ ಮೊಹಮ್ಮದ್ ಮುದಸ್ಸಿರ್ ಅವರಿಗೆ ಸೇರಿದ ಟಿ.ವಿ.ಎಸ್. ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಬಿಡಿಭಾಗಗಳ ದಾಸ್ತಾನು ಹಾಗೂ ವ್ಯಾಪಾರ ಮಳಿಗೆಯಿಂದ 39,370 ರೂ. ನಗದು, 4 ಮೊಬೈಲ್ ಫೋನ್ ಮತ್ತು ಚಾರ್ಜರ್ ಹಾಗೂ ಇಂಟರ್‌ನೆಟ್ ಮೋಡೆಮ್ ಕಳವಾಗಿದೆ.


ಆ. 26ರಂದು ಸಂಜೆ 6.30ಕ್ಕೆ ಮಳಿಗೆಯನ್ನು ಮುಚ್ಚಿ ಹೋಗಿದ್ದು, 27ರಂದು ರವಿವಾರವಾದ್ದರಿಂದ ಮಳಿಗೆ ತೆರೆದಿರಲಿಲ್ಲ. 28ರಂದು 9ಗಂಟೆಗೆ ಮಳಿಗೆ ತೆರೆದು ನಗದು ಕೌಂಟರಿಗೆ ಹೋದಾಗ ಕೌಂಟರಿನ ಹಣ ಇಡುವ ಡ್ರಾವರ್ ಬೀಗ ತೆರೆದ ಸ್ಥಿತಿಯಲ್ಲಿತ್ತು. ಮ್ಯಾನೇಜರ್‌ಗೆ ಕರೆ ಮಾಡಿ ವಿಚಾರ ತಿಳಿಸಿದ್ದು, ಅವರು ಸ್ಥಳಕ್ಕೆ ಬಂದ ಅನಂತರ ಪರಿಶೀಲಿಸಿದಾಗ ನಗದು ಹಾಗೂ ಮೊಬೈಲ್ ಫೋನ್, ಚಾರ್ಜರ್ ಇಂಟರ್‌ನೆಟ್ ಮೋಡೆಮ್ ಕಳವಾಗಿದ್ದು ತಿಳಿದುಬಂದಿದೆ.ಅನ0ತರ ಸಂಪೂರ್ಣ ಮಳಿಗೆಯನ್ನು ಪರಿಶೀಲಿಸಿದಾಗ ಮಳಿಗೆಯ ಎಡಭಾಗದಲ್ಲಿದ್ದ ಬಾಗಿಲಿನ ಪಕ್ಕದ್ದಲ್ಲಿ ತಗಡು ಶೀಟನ್ನು ಕತ್ತರಿಸಿ ತೆಗೆದಿರುವುದು ಕಂಡುಬAದಿದೆ. ಅದರ ಮೂಲಕ ಯಾರೋ ಕಳ್ಳರು ಒಳ ಪ್ರವೇಶಿಸಿ ಕಳವು ಮಾಡಿದ್ದಾರೆ.


ಈ ಕುರಿತಂತೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!