ಜನ ಮನದ ನಾಡಿ ಮಿಡಿತ

Advertisement

ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ;ಗಂಭೀರವಾಗಿ ಗಾಯಗೊಂಡ ರಿಕ್ಷಾ ಚಾಲಕ

ಬಂಟ್ವಾಳ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.


ಅಟೋ ಚಾಲಕ ಮಹಮ್ಮದ್ ಸಾದಿಕ್ ಎಂಬಾತನಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಗೂಡಿನ ಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಸುರಕ್ಷಾ ಅಧಿಕಾರಿಯೋರರ್ವರನ್ನು ರಿಕ್ಷಾದಲ್ಲಿ ಮಹಮ್ಮದ್ ಸಾದಿಕ್ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಪಾಣೆಮಂಗಳೂರು ಕಡೆಯಿಂದ ಬರುವ ಕಾರೊಂದು ರೈಲು ನಿಲ್ದಾಣದ ಸಮೀಪವಿರುವ ಲಯನ್ಸ್ ಸೇವಾ ಮಂದಿರದ ಪಾರ್ಕ್ ನ ಮುಂಭಾಗದಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ.ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾದರೆ ಪ್ರಯಾಣಿಕೆ ಅಮಿತಾ ಅವರು ಅಲ್ಪಸ್ವಲ್ಪ ಪ್ರಮಾಣದ ಗಾಯಗಳಿಂದ ಪಾರಾಗಿದ್ದಾರೆ.


ದುಡುಕುತನದಿಂದ ಚಲಾಯಿಸಿ ಅಪಘಾತಕ್ಕೆ ಕಾರಣನಾದ ಕಾರು ಚಾಲಕ ಉಬೈದುಲ್ಲಾ ವಿರುದ್ದ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!