ಜನ ಮನದ ನಾಡಿ ಮಿಡಿತ

Advertisement

ಸಿಟಿ ಬಸ್ ಚಾಲಕನ ಧಾವಂತ; ಕಂಡೆಕ್ಟರ್ ಧಾರುಣ ಸಾವು …!

ಮಂಗಳೂರು; ಖಾಸಗಿ ಬಸ್ಸಿನ ಬಾಗಿಲಿನಲ್ಲಿ ನೇತಾಡುತ್ತಿದ್ದ ಬಸ್‌ ಕಂಡೆಕ್ಟರ್ ಹೊರಕ್ಕೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ನಗರದ ನಂತೂರು ವೃತ್ತದಲ್ಲಿನ ನಡೆದಿದೆ.


15 ನಂಬರಿನ ಬಸ್ ಕದ್ರಿ ಕೆಪಿಟಿಯಿಂದ ಬಂದು ನಂತೂರು ವೃತ್ತದಲ್ಲಿ ಸಡನ್ ತಿರುವು ಪಡೆದಿದ್ದು ಎದುರಿನ ಬಾಗಿಲಲ್ಲಿ ನಿಂತಿದ್ದಕಂಡೆಕ್ಟರ್ ಕೆಳಕ್ಕೆ ಎಸೆಯಲ್ಪಟ್ಟಿದ್ದಾನೆ. ಬಸ್ ನಿರ್ವಾಹಕನಾಗಿದ್ದ ಮೂಲತಃ ಬಾಗಲಕೋಟ ಜಿಲ್ಲೆಯ ನಿವಾಸಿ, ಸದ್ಯ ಸುರತ್ಕಲ್ ತಡಂಬೈಲ್ ನಲ್ಲಿ ವಾಸವಿದ್ದ ಈರಯ್ಯ (23) ನೇರವಾಗಿ ರಸ್ತೆಗೆ ಎಸೆಯಲ್ಪಟ್ಟಿದ್ದು ಕೂಡಲೇ ಅಲ್ಲಿದ್ದ ಸ್ಥಳೀಯ ಪೊಲೀಸರು ಮತ್ತು ಸಾರ್ವಜನಿಕರು ಸೇರಿ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.


ತಲೆಯ ಭಾಗಕ್ಕೆ ತೀವ್ರ ಪೆಟ್ಟು ಬಿದ್ದ ಕಾರಣ ರಾತ್ರಿ 8 ಗಂಟೆ ಸುಮಾರಿಗೆ ಯುವಕ ಸಾವನ್ನಪ್ಪಿದ್ದಾನೆ. ಇದರ ವಿಡಿಯೋ ಎದುರಿನ ವಾಹನದಲ್ಲಿದ್ದ ಫ್ರಂಟ್ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದ್ದು ಇ ದೀಗ ಜಾಲತಾಣದಲ್ಲಿ ವೈರಲ್ ಆಗಿದೆ. ಬಸ್ ವೇಗವಾಗಿ ಚಲಿಸಿದ್ದರಿಂದಲೇ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕದ್ರಿ ಸಂಚಾರಿ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಕಲೆಕ್ಷನ್ ಮಾಡುವ ಮತ್ತು ಟೈಮ್ ಕೀಪಿಂಗ್ ಭರದಲ್ಲಿ ನಗರದ ಖಾಸಗಿ ಬಸ್ ನಿರ್ವಾಹಕರು, ಚಾಲಕರು ಎರ್ರಾಬಿರ್ರಿಯಾಗಿ ವರ್ತಿಸುತ್ತಿದ್ದು, ಬಸ್ತಿನಲ್ಲಿ ಸಿಬಂದಿಯಾಗಿದ್ದ ಯುವಕನೊಬ್ಬ ಬಲಿಯಾಗಿದ್ದಾನೆ.

Leave a Reply

Your email address will not be published. Required fields are marked *

ಮೂಡಬಿದ್ರೆ: ಮಿಜಾರ್‌ನಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಸುಟ್ಟ ಗಾಯ…!

ಮಂಗಳೂರು: ತಂಗಿಯ ಸಾವಿನ ಬೆನ್ನಲ್ಲೇ ಸಹೋದರನೂ ಶವವಾಗಿ ಪತ್ತೆ; ಮಂಗಳೂರಿನ ಲಾಡ್ಜ್‌ನಲ್ಲಿ ದುರಂತ

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್; ತಪ್ಪಿದ ಭಾರೀ ಅನಾಹುತ

ಮಂಗಳೂರು: ತಲಪಾಡಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ; ಗಂಭೀರ ಗಾಯ

ಪರ್ಕಳ: ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬುಲೆಟ್; ಯುವಕ ಸಾವು

ಬಂಟ್ವಾಳ: ಬಂಟ್ವಾಳ ಪುರಸಭೆಯ ಹೊಸ ಜೆಸಿಬಿಗೆ ತ್ಯಾಜ್ಯ ವಿಲೇವಾರಿ ಕಾರ್ಯಕ್ಕೆ ಚಾಲನೆ

ವಾಮದಪದವು: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ…!

ಮಂಗಳೂರು: ಪುದು ಗ್ರಾಮ ಪಂಚಾಯಿತಿಯಲ್ಲಿ ವಿಶಿಷ್ಟ ‘ಆಟಿಡೊಂಜಿ ದಿನ’ ಆಚರಣೆ

error: Content is protected !!