ಎರಡು ಅಥವಾ ಮೂರು ಗ್ರಾ.ಪಂ.ಗಳನ್ನು ಸೇರಿಸಿ ಖಾಸಗಿ ಕಂಪೆನಿಗಳ ಸಿಎಸ್ಆರ್ ನಿಧಿ ಬಳಸಿಕೊಂಡು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಆರಂಭಿಸಲು ಯೋಜನೆ ಹಾಕಿಕೊಂಡಿದ್ದೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಿದ್ದೇವೆ. ಸರಕಾರಿ ಶಾಲೆಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿಗೆ ಸಾಕಷ್ಟು ಬೇಡಿಕೆಯಿದೆ. ಈ ಹಿನ್ನೆಲೆಯಲ್ಲಿ ಎರಡು ಮೂರು ಗ್ರಾ.ಪಂ.ಗಳನ್ನು ಒಟ್ಟಿಗೆ ಸೇರಿಸಿ ಕೆಪಿಎಸ್ ಆರಂಭಿಸಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ತೆರೆಯುವ ಯೋಚನೆಯಿದೆ ಎಂದರು.



