ಜನ ಮನದ ನಾಡಿ ಮಿಡಿತ

Advertisement

 ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ..; ಗೃಹಲಕ್ಷ್ಮಿ ಯೋಜನೆಯ ಸಂಭ್ರಮ 

ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ನಾರಿಯರ ಜೋಶ್ ಹೆಚ್ಚಿಸಿದೆ. ಗೃಹಲಕ್ಷ್ಮಿ ಯೋಜನೆಯ ಸಂಭ್ರಮ ರಾಜ್ಯದ ವಿವಿಧೆಡೆ ಹಬ್ಬದ ವಾತಾವರಣವನ್ನೇ ತಂದಿದೆ. ಗೃಹಲಕ್ಷ್ಮಿ ಸ್ಕೀಮ್‌ಗೆ ಚಾಲನೆ ನೀಡುವ ಮುಂಚೆಯೇ ಗೃಹಲಕ್ಷ್ಮಿ ಯೋಜನೆಗೆ ಮಹಿಳಾ ಮಣಿಯರು ಕಲರ್‌ಫುಲ್ ಸ್ವಾಗತ ಕೋರಿದ್ದಾರೆ. ರಂಗೋಲಿಯಲ್ಲಿ ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ ಅಂತಾ ಚಿತ್ತಾರ ಮೂಡಿಸಿದ್ದು ಗಮನ ಸೆಳೆದಿದೆ.

ಗೃಹಲಕ್ಷ್ಮಿ ಯೋಜನೆ ಪ್ರತಿ ಮನೆಯ ಯಜಮಾನಿಗೂ ಎರಡು ಸಾವಿರ ನೀಡುವ ಗುರಿಯನ್ನು ಹೊಂದಿದೆ. ಸರ್ಕಾರದ ಈ ಸೌಲಭ್ಯಕ್ಕಾಗಿ ನಾರಿಯರು ವಿಭಿನ್ನವಾಗಿ ಸ್ವಾಗತ ಕೋರಿದ್ದಾರೆ. ಮನೆಗೆ ಧನಲಕ್ಷ್ಮಿ ಬರುತ್ತಿದ್ದಾಳೆ ಎನ್ನುವ ರೀತಿಯಲ್ಲಿ ರಂಗೋಲಿ ಹಾಕುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ದೊಡ್ಡಗುಬ್ಬಿಯಲ್ಲಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಿನ್ನೆಲೆ ರಂಗೋಲಿ ಬಿಡಿಸಿ ಸಂಭ್ರಮ ಆಚರಿಸಿದ್ದಾರೆ. ಸುಂದರ ರಂಗೋಲಿಯಲ್ಲಿ ನಾನೇ ಯಜಮಾನಿ, ನಾನೇ ಗೃಹಲಕ್ಷ್ಮಿ ಅಂತಾ ಬರೆದಿದ್ದು ತಮ್ಮ ಸಂತೋಷವನ್ನು ಹೊರ ಹಾಕುತ್ತಿದ್ದಾರೆ. ರಂಗೋಲಿಯ ಬಳಿ ಫೋಟೋ ತೆಗೆಸಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಬೆಂಗಳೂರು ಟೌನ್ ಹಾಲ್ ಬಳಿ ಗೃಹಲಕ್ಷ್ಮಿ ಕಾರ್ಯಕ್ರಮ ಕಳೆ ಕಟ್ಟಿತ್ತು. ಬಿಬಿಎಂಪಿ ಸಿಬ್ಬಂದಿ ಮಹಿಳಾ ಮಣಿಯರಿಗೆ ಗುಲಾಬಿ ಕೊಟ್ಟು ಬರಮಾಡಿಕೊಂಡಿದ್ದಾರೆ. ಟೌನ್ ಹಾಲ್ ಮುಂಭಾಗದಲ್ಲಿ ಸುಂದರವಾಗಿ ರಂಗೋಲಿ ಇಟ್ಟು ಸಂಭ್ರಮ ಆಚರಿಸಿದ್ದಾರೆ.

ಮೈಸೂರಲ್ಲಿ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡುತ್ತಿದ್ದು ಇದಕ್ಕಾಗಿ ಬೃಹತ್ ಸಮಾವೇಶವನ್ನೇ ಆಯೋಜಿಸಿದೆ. ಈ ಸಮಾವೇಶಕ್ಕೂ ಮುನ್ನ ಮಹಿಳಾಮಣಿಯರು ಕುಣಿದು ಕುಪ್ಪಳಿಸಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!