ಜನ ಮನದ ನಾಡಿ ಮಿಡಿತ

Advertisement

ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆ

ಮುಲ್ಕಿ: ಪಕ್ಷಿಕೆರೆ ಸಮೀಪದ ಪಂಜ ಕೊಯಿಕುಡೆ ಹಾಲು ಉತ್ಪಾದಕರ ಸಹಕಾರ ಸಂಘದ 2022-2023 ನೇ ಸಾಲಿನ ಸರ್ವ ಸದಸ್ಯರ ಸಭೆಯು ಅಧ್ಯಕ್ಷ ನವೀನ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಒಕ್ಕೂಟದ ಉಪ ವ್ಯವಸ್ಥಾಪಕ ಡಾ. ಚಂದ್ರಶೇಖರ್ ಭಟ್ ರವರು ಮಾತನಾಡಿ ಹಾಲಿನ ಗುಣಮಟ್ಟವನ್ನು ಕಾಪಾಡಲು ಹಸುಗಳ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.


ಒಕ್ಕೂಟದ ವಿಸ್ತರಣಾಧಿಕಾರಿ ಸಂದೀಪ್ ರವರು ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಜಗನ್ನಾಥ್ ದೇವಾಡಿಗ, ನಿರ್ದೇಶಕರುಗಳಾದ ವಸಂತ ಶೆಟ್ಟಿ, ಚಂದ್ರಹಾಸ್ ಶೆಟ್ಟಿ, ಸತೀಶ್ ಶೆಟ್ಟಿ, ಸತೀಶ್ ಜೆ ಶೆಟ್ಟಿ, ರಾಜೇಶ್ ಶೆಟ್ಟಿ, ಮೀರಾ, ಶಾರದ ದೇವಾಡಿಗ, ಶೀಲಾ ಜೆ ಕೋಟ್ಯಾನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂಘದ ಮಾಜೀ ಅಧ್ಯಕ್ಷರುಗಳಾದ ವಿಶ್ವನಾಥ ಶೆಟ್ಟಿ ಪಂಜದ ಗುತ್ತು , ಸದಾನಂದ ಶೆಟ್ಟಿ ಪಂಜ, ಸತೀಶ್ ಜೆ .ಶೆಟ್ಟಿ ಪಂಜದ ಗುತ್ತು, ಸತೀಶ್ ಎಂ ಶೆಟ್ಟಿ ಬೈಲ ಗುತ್ತು, ನವೀನ್ ಶೆಟ್ಟಿ ನಲ್ಯ ಗುತ್ತು, ಕೆಮ್ರಾಲ್ ಗ್ರಾ.ಪಂ ಸದಸ್ಯ ಸುರೇಶ್ ಪಂಜ ರವರನ್ನು ಮತ್ತು ಕಾರ್ಯದರ್ಶಿಯವರನ್ನು ಸೇವೆಯನ್ನು ಮಾಡಿದ ಸಿಬ್ಬಂದಿಗಳನ್ನು ಗೌರವಿಸಲಾಯಿತು.


ಸಂಘದ ರೈತರಿಗೆ 22ಶೇ ಡಿವಿಡೆಂಟ್ ಫಂಡ್ ಅನ್ನು ವಿತರಿಸಲಾಯಿತು 25ನೇ ವರ್ಷದ ಸವಿನೆನಪಿಗಾಗಿ ಸದಸ್ಯರಿಗೆ ಸ್ಟೀಲ್ ಪಾತ್ರೆಗಳನ್ನು ವಿತರಿಸಲಾಯಿತು ಕಾರ್ಯಕ್ರಮದಲ್ಲಿ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ 85% ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು .
ಸಂಘಕ್ಕೆ 25ನೇ ವರ್ಷದ ಕೊಡುಗೆಯಾಗಿ ರತ್ನ ವಸಂತ ಶೆಟ್ಟಿ ನಲ್ಯ ಗುತ್ತು ರವರು ಧ್ವಜ ಸ್ತಂಭದ ಕಟ್ಟೆಯನ್ನು ನಿರ್ಮಿಸಿ ಕೊಟ್ಟಿದ್ದಾರೆ ಎಂದು ಅಧ್ಯಕ್ಷ ನವೀನ್ ಶೆಟ್ಟಿ ಸಭೆಯಲ್ಲಿ ತಿಳಿಸಿದರು.
ಕಾರ್ಯದರ್ಶಿ ಜಗದೀಶ್ ಶೆಟ್ಟಿ ಧನ್ಯವಾದ ಅರ್ಪಿಸಿದರು ಸತೀಶ್ ಎಂ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!