ಜನ ಮನದ ನಾಡಿ ಮಿಡಿತ

Advertisement

ಚಂದ್ರಯಾನ-3 ಬೆನ್ನಲ್ಲೇ ಮತ್ತೊಂದು ಸಾಹಸಕ್ಕೆ ಕೈ ಹಾಕಿದ ಇಸ್ರೋ

ಮೊನ್ನೆ ಮೊನ್ನೆಯಷ್ಟೇ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ-3 ಯೋಜನೆಯಲ್ಲಿ ಯಶಸ್ಸು ಕಂಡಿದೆ. ಇದರ ಬೆನ್ನಲ್ಲೇ ಇಸ್ರೋ ಮತ್ತೊಂದು ವಿಶೇಷ ಸಾಧನೆ ಮಾಡುತ್ತಿದ್ದು ಈ ಬಾರಿ ನೇರ ಸೂರ್ಯನನ್ನೇ ಟಾರ್ಗೆಟ್ ಮಾಡಿದೆ.

ಈಗಾಗಲೇ ಈ ಯೋಜನೆಯು ಕೊನೆ ಹಂತ ತಲುಪಿದ್ದು ಸೂರ್ಯನನ್ನ ಅಧ್ಯಯನ ಮಾಡುವ ಆದಿತ್ಯ-L1 ಮಿಷನ್​ನ ಪೂರ್ವಾಭ್ಯಾಸ (ರಿಹರ್ಸಲ್​)ವನ್ನು ಸದ್ಯ ಇಸ್ರೋ ಮುಗಿಸಿದೆ ಎಂದು ತಿಳಿದು ಬಂದಿದೆ.

ಆದಿತ್ಯ-L1 ಮಿಷನ್​ನ ಉಡಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಈ ಮಿಷನ್​ ಅನ್ನು ಲಾಂಚ್ ಮಾಡುವ ಕಾರ್ಯಕ್ಕಾಗಿ ಇಂದು ಪೂರ್ವಾಭ್ಯಾಸ ನಡೆಸಿ ರಾಕೆಟ್​ ವೆಹಿಕಲ್ ಅಂತರಿಕ ಪರೀಕ್ಷೆಯನ್ನು ಶ್ರೀಹರಿಕೋಟಾದಲ್ಲಿ ಮುಗಿಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆ ಕಾಣದಿದ್ದರಿಂದ ಇಸ್ರೋ ಯಶಸ್ವಿಯಾಗಿ ರಿಹರ್ಸಲ್ ಮುಗಿಸಿದೆ.

ಈ ಬಗ್ಗೆ ಇಸ್ರೋ ತನ್ನ ಅಧೀಕೃತ ಎಕ್ಸ್​ನಲ್ಲಿ ಮಾಹಿತಿ ನೀಡಿದ್ದು ಸೆಪ್ಟೆಂಬರ್​ 2 ರಂದು ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಮಿಷನ್​ ಅನ್ನು ಲಾಂಚ್​ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಸಿದ್ಧತೆ ನಡೆದಿವೆ ಎಂದು ಇಸ್ರೋ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!