ಎಣ್ಣೆ ಸಾಲ ಕೊಡಲಿಲ್ಲ ಎಂದು ಬಾರ್ ಕ್ಯಾಶಿಯರ್ಗೆ ಚಾಕುವಿನಿಂದ ಇರಿದ ಘಟನೆ ಯಡಿಯೂರು ಬಳಿಯ ಎಂಬಿಆರ್ ಬಾರ್ ನಲ್ಲಿ ನಡೆದಿದೆ.

ಆಗಸ್ಟ್ 28ರ ರಾತ್ರಿ 1.40 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಪುನೀತ್ ಮತ್ತು ಸಹಚರರು ಕ್ಯಾಶಿಯರ್ ಸ್ವಾಗತ್ ಗೌಡ ಎಂಬಾತನಿಗೆ ಚಾಕುವಿನಿಂದ ಇರಿದಿದ್ದಾರೆ.
ಕ್ಯಾಶಿಯರ್ ಸ್ವಾಗತ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ.
ಇನ್ನು ಈ ಘಟನೆ ಸಂಬಂಧಿಸಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.



