ವಿಜ್ಞಾನಿ ವಲಮರ್ತಿ ಚಂದ್ರಯಾನ -3ರ ಉಡಾವಣೆಯ ದ್ವನಿಯಾಗಿದ್ದರು. ಹೃದಯಾ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ವಲಮರ್ತಿ ಅವರು ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ತಮ್ಮ ಕೊನೆಯ ದಿನಗಳಲ್ಲಿ ಚಂದ್ರಯಾನ 3 ಯಶಸ್ಸಿನಲ್ಲಿ ಭಾಗಿಯಾಗಿದ್ದರು. ರಾಕೆಟ್ ಲಾಂಚಿಂಗ್ ಸಂದರ್ಭದಲ್ಲಿ ಇವರು ನೀಡುವ ಕೌಂಟ್ ಡೌನ್ ಬಹಳ ಪ್ರಾಮುಖ್ಯದ್ದಾಗಿದೆ.

ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಇಸ್ರೋದ ಮಾಜಿ ನಿರ್ದೇಶಕ ಡಾ.ಪಿ.ವಿ.ವೆಂಕಟಕೃಷ್ಣನ್, “ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಕಾರ್ಯಾಚರಣೆಗಳ ಕ್ಷಣಗಣನೆಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ -3 ಅವರ ಅಂತಿಮ ಕ್ಷಣಗಣನೆ ಪ್ರಕಟಣೆಯಾಗಿತ್ತು. ಅನಿರೀಕ್ಷಿತ ಅಗಲಿಕೆಯಿಂದ ದುಃಖವಾಗುತ್ತಿದೆ. ಪ್ರಣಾಮಗಳು!” ಎಂದು ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನ ಅರಿಯಲೂರಿನಲ್ಲಿ ಜನಿಸಿದ ವಲಮರ್ತಿ ಅವರು 1984 ರಲ್ಲಿ ಇಸ್ರೋಗೆ ಸೇರಿದ್ದು, ಇನ್ಸಾಟ್ 2 ಎ, ಐಆರ್ಎಸ್ ಐಸಿ, ಐಆರ್ಎಸ್ ಐಡಿ, ಟಿಇಎಸ್ ಸೇರಿದಂತೆ ಅನೇಕ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. 2011 ರಲ್ಲಿ ಜಿಸ್ಯಾಟ್ -12 ಮಿಷನ್ನ ಯೋಜನಾ ನಿರ್ದೇಶಕಿ ಟಿ.ಕೆ.ಅನುರಾಧಾ ನಂತರ ಪ್ರತಿಷ್ಠಿತ ಯೋಜನೆಯ ನೇತೃತ್ವ ವಹಿಸಿದ ಇಸ್ರೋದ ಎರಡನೇ ಮಹಿಳಾ ವಿಜ್ಞಾನಿಯಾಗಿದ್ದಾರೆ.ಅವರು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ರಾಡಾರ್ ಇಮೇಜಿಂಗ್ ಉಪಗ್ರಹ ವಲರ್ಮತಿ – ರಿಸ್ಯಾಟ್ -1 ರ ಯೋಜನಾ ನಿರ್ದೇಶಕರಾಗಿದ್ದರು ಮತ್ತು ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥ 2015 ರಲ್ಲಿ ತಮಿಳುನಾಡು ಸರ್ಕಾರ ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.



