ಜನ ಮನದ ನಾಡಿ ಮಿಡಿತ

Advertisement

ಶ್ರೀ ಕೃಷ್ಣ ಫ್ರೆಂಡ್ಸ್ ಕ್ಲಬ್ ನ 32ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ

ಮೂಡಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಮೊಸರು ಕುಡಿಕೆ ಉತ್ಸವಕ್ಕೆ ಪೂರಕವಾಗಿ ಮೂಡುಬಿದಿರೆಯ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಸಮಾಜಮಂದಿರದಲ್ಲಿ ಭಾನುವಾರ ೩೨ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆ ನಡೆಯಿತು.

ದಂತವೈದ್ಯ ಡಾ. ವಿನಯಕುಮಾರ ಹೆಗ್ಡೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಧಾರ್ಮಿಕ ಹಿನ್ನೆಲೆಯ, ಕಲಾತ್ಮಕ ಚಟುವಟಿಕೆಯ ಪ್ರತೀಕವಾದ ಮುದ್ದು ಕೃಷ್ಣ ವೇಷ ಸ್ಪರ್ಧೆಯನ್ನು ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ಮೂರು ದಶಕಗಳಿಂದ ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿರುವುದು ಶ್ಲಾಘನೀಯ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತೀವ್ರ ಉತ್ಸಾಹ ವ್ಯಕ್ತವಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದವರು ತಿಳಿಸಿದರು.
ಮುಖ್ಯಅತಿಥಿಯಾಗಿ ಪಾಲ್ಗೊಂಡ ಉದ್ಯಮಿ ಪ್ರಭಾತ್ ಚಂದ್ರ ಜೈನ್ ಮಾತನಾಡಿ, ಮನೋಸ್ಥೈರ್ಯ, ಚತುರತೆ ಇದ್ದರೆ ಯಾವುದೇ ಸಮಸ್ಯೆಯನ್ನು ಲೀಲಾಜಾಲವಾಗಿ ಪರಿಹರಿಸಬಹುದೆಂಬುದನ್ನು ಶ್ರೀ ಕೃಷ್ಣ ತನ್ನ ವ್ಯಕ್ತಿತ್ವದ ಮೂಲಕ ಸಾರಿರುವುದು ಮಾನವರಾದ ನಮಗೆಲ್ಲ ಆದರ್ಶ ಎಂದರು.


ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಘಟನೆಯ ಪ್ರ. ಕಾರ್ಯದರ್ಶಿ ಸುದರ್ಶನ ಎಂ. ಎಲ್ಲ ಕಾಲಕ್ಕೂ ಸಲ್ಲುವ ಶ್ರೀ ಕೃಷ್ಣನ ವ್ಯಕ್ತಿತ್ವ ವಿಶೇಷ ತಿಳಿಸಿ ಮನುಕುಲ ಯಾವ ರೀತಿ ಬದುಕಬೇಕು ಎಂಬುದನ್ನು ತಿಳಿಸಿಕೊಟ್ಟು ಜಗ್ದ್ ವಂದ್ಯನೆನೆಸಿಕೊಂಡಿದ್ದಾನೆ ಎಂದರು.
ತೀರ್ಪುಗಾರರಾದ ಶಿವಕುಮಾರ ಉಮ್ಮತ್ತೂರು, ರಮ್ಯಾ ಸುರೇಂದ್ರ ಕಾರ್ಕಳ ಮತ್ತು ರೇಷ್ಮಾ ಹರ್ಷ ಇವರನ್ನು ಅತಿಥಿಗಳು ಗೌರವಿಸಿದರು.
ಸಂಚಾಲಕ ಸಂತೋಷ್ ಕುಮಾರ್ ಸ್ವಾಗತಿಸಿ, ಧನಂಜಯ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ಜಗದೀಶ ಶೆಟ್ಟಿ, ಸಂಜೀವ ನಾಯ್ಕ್ , ಜತೆ ಕಾರ್ಯದರ್ಶಿಗಳಾದ ಸತೀಶ `ಭಂಡಾರಿ, ಆನಂದ ಸುವರ್ಣ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!