ಜನ ಮನದ ನಾಡಿ ಮಿಡಿತ

Advertisement

ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ಹಾಗೂ ಮೂಲ್ಕಿ ತಾಲೂಕು ಮಟ್ಟದ ಮಹಿಳಾ ಮಂಡಲದ ಸದಸ್ಯರಿಗೆ ಛದ್ಮವೇಷ ಸ್ಪರ್ಧೆ

ಮುಲ್ಕಿ: ನೆಹರು ಯುವ ಕೇಂದ್ರ ಮಂಗಳೂರು ,ರಜತ ಮಹೋತ್ಸವ ಸಮಿತಿ ಮಹಿಳಾ ಮಂಡಲ (ರಿ.) ತೋಕೂರು , ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ವಿಜೇತ ಯುವಕ ಸಂಘ (ರಿ.) ತೋಕೂರು, ರೋಟರಿ ಸಮುದಾಯದಳ ತೋಕೂರು ಇವರ ಸಂಯುಕ್ತ ಆಶ್ರಯದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ಹಾಗೂ ಮೂಲ್ಕಿ ತಾಲೂಕು ಮಟ್ಟದ ಮಹಿಳಾ ಮಂಡಲದ ಸದಸ್ಯರಿಗೆ ಛದ್ಮವೇಷ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ವಿಜಯಲಕ್ಷ್ಮಿ ಆಚಾರ್ಯ ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ಕೃಷ್ಣ ತನ್ನ ಜೀವನದುದ್ದಕ್ಕೂ ಯುವಜನತೆಯನ್ನು ಒಗ್ಗೂಡಿಸಿ ಕೊಂಡು ಹೇಗೆ ಧರ್ಮವನ್ನು ಉಳಿಸಿದ ಹಾಗೂ ಹೇಗೆ ಮಹಿಳೆಯರಿಗೆ ತನ್ನ ಜೀವನದಲ್ಲಿ ಮಹತ್ವವನ್ನು ನೀಡಿದ್ದ ಎಂಬುದನ್ನು ನಾವು ತಿಳಿದುಕೊಂಡು ಶ್ರೀಕೃಷ್ಣನ ಜೀವನ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ ದೀಪ್ತಿ ಭಟ್ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು. ಸ್ಪರ್ಧೆಯ ತೀರ್ಪುಗಾರರಾಗಿ ಆಗಮಿಸಿದ ಖ್ಯಾತ ಲೇಖಕಿ ಶಕುಂತಲಾ ಭಟ್ ಮತ್ತು ಖ್ಯಾತ ರಂಗಭೂಮಿ ಕಲಾವಿದ, ನಿರ್ದೇಶಕ ಜನಾರ್ಧನ ಪಡುಪಣಂಬೂರು ಇವರು ಸ್ಪರ್ಧೆಯ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಗೆ ನೂತನ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಹೇಮನಾಥ ಅಮೀನ್ ಇವರನ್ನು ಅಭಿನಂದಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು ಕಾರ್ಯಕ್ರಮವನ್ನು ವಿನೋದಾ ಭಟ್ ನಿರೂಪಿಸಿದರು. ಅನುಪಮಾ ಎ ರಾವ್ ಸ್ವಾಗತಿಸಿ, ಶೇಖರ್ ಶೆಟ್ಟಿಗಾರ್ ಇವರು ವಂದನಾರ್ಪಣೆಗೈದರು.

ಮುದ್ದುಕೃಷ್ಣ ಸ್ಪರ್ಧಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನ ಬಿಂದು, ದ್ವಿತೀಯ ಸ್ಥಾನವನ್ನಆದ್ಯ, ತೃತೀಯ ಸ್ಥಾನವನ್ನ ಸುಖಿ ಪಡೆದುಕೊಂಡರು.
ಬಾಲಕೃಷ್ಣ ಸ್ಪರ್ಧಾ ವಿಭಾಗ ದಲ್ಲಿ ಪ್ರಥಮ ಸ್ಥಾನವನ್ನ ದಿಯಾ ಶೆಟ್ಟಿ, ದ್ವಿತೀಯ ಸ್ಥಾನವನ್ನಉಜ್ವಲಿತ, ತೃತೀಯ ಸ್ಥಾನವನ್ನ ಮಿತಾಂಶ್ ಪಡೆದುಕೊಂಡರು. ಇನ್ನು ಮಹಿಳೆಯರ ಛದ್ಮ ವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನ ಎಂ.ಜಿ .ಗೀತಾ (ಶ್ರೀ ದುರ್ಗಾ ಶಕ್ತಿ ಮಹಿಳಾ ಮಂಡಲ ಕೆರೆಕಾಡು), ದ್ವಿತೀಯ ಸ್ಥಾನವನ್ನ ಪ್ರಿಯಾ (ನವಜ್ಯೋತಿ ಮಹಿಳಾ ಮಂಡಲ ಕೊಯಿಕುಡೆ), ತೃತೀಯ ಸ್ಥಾನವನ್ನ ರಾಧಾ (ಮಹಿಳಾ ಮಂಡಲ (ರಿ.) ಹಳೆಯಂಗಡಿ) ಮುಡಿಗೇರಿಸಿಕೊಂಡರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!