ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ ( ರಿ) ಹಳೆಯಂಗಡಿ; ಸಾರ್ವಜನಿಕ ಶ್ರದ್ಧಾಂಜಲಿ ಸಭೆ.

ಕರ್ನಾಟಕ ರಾಜ್ಯಪ್ರಶಸ್ತಿ ಪುರಸ್ಕೃತ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಅಜೀವ ಸದಸ್ಯರಾಗಿ , ಅಧ್ಯಕ್ಷರಾಗಿ, ವಿವಿಧ ಹುದ್ದೆಗಳನ್ನು ಅಲಂಕರಿಸಿ , ಸಲಹಾ ಸಮಿತಿಯ ಸದಸ್ಯರಾಗಿ, ದೇವಾಡಿಗ ಸಮಾಜ ಸೇವಾ ಸಂಘ (ರಿ), ಪಾವಂಜೆ ಇದರ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ, ಕೋಶಾಧಿಕಾರಿಯಾಗಿ, ಸಂಘಟನಾ ಕಾರ್ಯದರ್ಶಿಯಾಗಿ, ಪ್ರಸ್ತುತ ಸಲಹೆಗಾರರಾಗಿ, ಕಟ್ಟಡ ಸಮಿತಿಯ ಉಪಾಧ್ಯಕ್ಷರಾಗಿ, ಪಾವಂಜೆ ಸರ್ವಶಕ್ತಿ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ, ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ, ಹಲವಾರು ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡ, ನಾಟಕ, ರೂಪಕ, ನೃತ್ಯ, ಯಕ್ಷಗಾನ ಕಲಾರಾಧನೆಯಲ್ಲಿ ತನ್ನದೇ ಆದ ಕಲಾಚಾತುರ್ಯ ಪಡೆದು ಇತ್ತೀಚೆಗೆ ದೈವಾಧೀನರಾದ ಶ್ರೀ ಸೋಮನಾಥ ದೇವಾಡಿಗ, “ಶಿವಸ್ವಾಮಿ ನಿಲಯ”, ಪಾವಂಜೆ ಇವರ ಆತ್ಮಕ್ಕೆ ಚಿರಶಾಂತಿ ಕೋರಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯು ಆದಿತ್ಯವಾರ ಸಂಜೆ 5.30 ಗಂಟೆಗೆ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು.

ಈ ಸಂತಾಪ ಸೂಚಿ ಸಭೆಯಲ್ಲಿ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿರುವ ಭಾಸ್ಕರ್ ಸಾಲ್ಯಾನ್, ಮೀರಾ ಬಾಯಿ ಕೆ., ಸತೀಶ್ ಎನ್ ಇಂದಿರಾನಗರ, ಮೋಹನ್ ಸುವರ್ಣ, ರಾಮದಾಸ್ ಪಾವಂಜೆ ಇವರು ಅಗಲಿದ ಸೋಮನಾಥ ದೇವಾಡಿಗ ಇವರ ಬಗ್ಗೆ ಗುಣಗಾನ ಮಾಡಿದರು.
ಶ್ರೀ ಸೋಮನಾಥ ದೇವಾಡಿಗ ಕುಟುಂಬಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಟಿ ಜಿ, ಜಂಟಿ ಸಂಸ್ಥೆಯ ಪದಾಧಿಕಾರಿಗಳು, ಟ್ರಸ್ಟಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀರಾಮದಾಸ್ ಪಾವಂಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!