ಜನ ಮನದ ನಾಡಿ ಮಿಡಿತ

Advertisement

ಪುನರೂರು ಪ್ರತಿಷ್ಠಾನ ಹಾಗೂ ಜನ ವಿಕಾಸ ಸಮಿತಿ ಆಶ್ರಯದಲ್ಲಿ ಶಿಕ್ಷಕ ಸಪರ್ಯಾ -2023 ಕಾರ್ಯಕ್ರಮ

ಮುಲ್ಕಿ: ಪುನರೂರು ಪ್ರತಿಷ್ಠಾನ ಹಾಗೂ ಜನ ವಿಕಾಸ ಸಮಿತಿ ಆಶ್ರಯದಲ್ಲಿ ಶಿಕ್ಷಕ ಸಪರ್ಯಾ -2023 ಕಾರ್ಯಕ್ರಮ ಮುಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಪಡುಬೆಳ್ಳೆ ಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಜಿನ್ ರಾಜ್ ಸಾಲ್ಯಾನ್ ಮಾತನಾಡಿ ವಿದ್ಯಾರ್ಥಿಗಳ ಜೀವನದ ಏಳಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ, ಮಕ್ಕಳಿಗೆ ಸಮಾಜದಲ್ಲಿ ಉನ್ನತ ಮಟ್ಟದ ಸ್ಥಾನಮಾನ ಗಳಿಸಲು ಶಿಕ್ಷಕರ ಶ್ರಮ ಅನನ್ಯವಾಗಿದ್ದು ದೇಶ ಸೇವೆ ಮಾಡಲು ಶಿಕ್ಷಣ ನೀಡುವ ಎನ್‌ಸಿಸಿ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯಂದು ಗೌರವ ಶ್ಲಾಘನೀಯ ಎಂದರು.


ವೇದಿಕೆಯಲ್ಲಿ ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಶೀತಲ್ ಸುಶೀಲ್, ಪುನರೂರು ಪ್ರತಿಷ್ಠಾನದ ಗೌರವಾಧ್ಯಕ್ಷೆ, ಎಚ್.ಕೆ.ಉಷಾ ರಾಣಿ, ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಪ್ರಧಾನ ಕಾರ್ಯದರ್ಶಿ ಶ್ರೇಯಾ ಪುನರೂರು,ಜಿತೇಂದ್ರ ವಿ ರಾವ್,ಪ್ರಾಣೇಶ್ ಭಟ್ ದೇಂದಡ್ಕ, ಜನವಿಕಾಸ ಸಮಿತಿ ಅಧ್ಯಕ್ಷೆ ಶೋಭಾ ರಾವ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮುಲ್ಕಿ ತಾಲ್ಲೂಕಿನ ಎನ್‌ಸಿಸಿ ಅಧಿಕಾರಿಗಳಾದ ಕ್ಯಾ. ರಾಜೇಶ್ ಶೆಟ್ಟಿಗಾರ್ ವಿಜಯಾ ಕಾಲೇಜು ಮುಲ್ಕಿ, ಲೆ.ಕ. ಪುರುಷೋತ್ತಮ ಕೆವಿ ಪೊಂಪೈ ಕಾಲೇಜ್ ಐಕಳ, ಚೀಫ್ ಆಫೀಸರ್ ಗಂಗಾಧರ ಪೂಜಾರಿ, ಶ್ರೀ ನಾರಾಯಣಗುರು ಸಂಯುಕ್ತ ಪದವಿ ಪೂರ್ವ ಕಾಲೇಜು ಮುಲ್ಕಿ, ಸೆಕೆಂಡ್ ಆಫೀಸರ್ ಪ್ರವೀಣ್ ಪೂಜಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಜೆ, ಕೇರ್ ಟೇಕರ್ ಹರೀಶ್ ಬಿ ಶ್ರೀ ದುರ್ಗಾಪರಮೇಶ್ವರೀ ಕಾಲೇಜು ಪ್ರೌಡ ಶಾಲೆ ವಿಭಾಗ ಕಟೀಲು ರವರನ್ನು ಗೌರವಿಸಲಾಯಿತು. ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಪ್ರಾಣೇಶ್ ಭಟ್ ದೇಂದಡ್ಕ, ಧನ್ಯವಾದ ಅರ್ಪಿಸಿದರು, ಜಿತೇಂದ್ರ ವಿ ರಾವ್ ನಿರೂಪಿಸಿದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!