ಜನ ಮನದ ನಾಡಿ ಮಿಡಿತ

Advertisement

ಇಂಡಿಯಾ ಇನ್ಮುಂದೆ ಭಾರತ.. ಭಾರತ ಬದಲಾದ್ರೆ ಪಾಕಿಸ್ತಾನಕ್ಕೆ ಲಾಭ; ‘ಇಂಡಿಯಾ’ ಮೇಲೆ ಹಕ್ಕು ಚಲಾಯಿಸಲು ಪ್ಲಾನ್‌

ಇಂಡಿಯಾ ಇನ್ಮುಂದೆ ಭಾರತ.. ದೇಶದ ಮರುನಾಮಕರಣದ ವಿಚಾರ ಕೇವಲ ಭಾರತದಲ್ಲಷ್ಟೇ ಅಲ್ಲ ಪಾಕಿಸ್ತಾನದಲ್ಲೂ ಬಹಳಷ್ಟು ಚರ್ಚೆಯಾಗಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂಡಿಯಾ ಅನ್ನೋ ದೇಶದ ಹೆಸರನ್ನು ಭಾರತ್ ಎಂದು ಬದಲಾಯಿಸಲಿದೆ ಎನ್ನಲಾಗಿದೆ.

ಈ ಮರುನಾಮಕರಣದ ವಿವಾದಕ್ಕೆ ದೇಶಾದ್ಯಂತ ಪರ, ವಿರೋಧದ ಚರ್ಚೆಯಾಗುತ್ತಿದೆ. ಇನ್ನೂ ಭಾರತದ ಸಂಸತ್‌ನಲ್ಲಿ ಮರುನಾಮಕರಣದ ವಿಚಾರವೇ ಪ್ರಸ್ತಾಪವಾಗಿಲ್ಲ. ಸಂವಿಧಾನದಲ್ಲಿ ತಿದ್ದುಪಡಿಯೂ ಆಗಿಲ್ಲ. ಅಷ್ಟರಲ್ಲಾಗಲೇ ಇಂಡಿಯಾ ಮೇಲೆ ನೆರೆರಾಷ್ಟ್ರ ಪಾಕಿಸ್ತಾನದ ಕಣ್ಣು ಬಿದ್ದಿದೆ.

ಒಂದು ವೇಳೆ ದೇಶದ ಹೆಸರನ್ನು ಭಾರತ ಬದಲಾವಣೆ ಮಾಡಿದರೆ ಇಂಡಿಯಾ ಹೆಸರಿನ ಮೇಲೆ ಹಕ್ಕು ಸಾಧಿಸಲು ಪಾಕಿಸ್ತಾನ ಚಿಂತನೆ ನಡೆಸಿದೆ. ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಇಂಡಿಯಾ ಬದಲು ಭಾರತ ಎಂದು ಮಾನ್ಯತೆ ಸಿಕ್ಕರೆ ಆಗ ಪಾಕಿಸ್ತಾನ ತನ್ನ ಹಕ್ಕು ಮಂಡಿಸಲು ಮುಂದಾಗಿದೆ. ಪಾಕಿಸ್ತಾನ ಕೂಡ ಇಂಡಸ್ ನದಿಯ ಪಾತ್ರದಲ್ಲಿದೆ. ಹೀಗಾಗಿ ಇಂಡಿಯಾ ಹೆಸರಿನ ಮೇಲೆ ಹಕ್ಕು ಸಾಧಿಸಲು ಪಾಕಿಸ್ತಾನ ಮಂಡಿಸುವ ಸಾಧ್ಯತೆ ಇದೆ.

ಭಾರತಕ್ಕೆ ಸ್ವಾತಂತ್ರ್ಯ ಸಿಗೋ ಮುನ್ನವೇ ಪಾಕಿಸ್ತಾನದ ಪಿತಾಮಹ ಮಹಮ್ಮದ್ ಅಲಿ ಜಿನ್ನಾ ಅವರು ಇಂಡಿಯಾ ಹೆಸರಿಗೆ ವಿರೋಧ ವ್ಯಕ್ತಪಡಿಸಿದ್ದರು. ನಮ್ಮದು ಪಾಕಿಸ್ತಾನ, ಇಂಡಿಯಾ ಹಿಂದೂಸ್ತಾನ. ಭಾರತವನ್ನು ಹಿಂದೂಸ್ತಾನ ಎಂದು ಕರೆಯಬೇಕೇ ವಿನಃ ಇಂಡಿಯಾ ಅಲ್ಲ ಎಂದು ಮಹಮ್ಮದ್ ಅಲಿ ಜಿನ್ನಾ ಹೇಳಿದ್ದರು. ಆದರೆ ಸಂವಿಧಾನದ ರಚನಾ ಸಭೆಯಲ್ಲಿ ಇಂಡಿಯಾ ಹಾಗೂ ಭಾರತ ಎಂದು ಹೆಸರಿಡಲು ಹೆಚ್ಚು ವೋಟ್ ಹಾಕಲಾಯಿತು. ಹೀಗಾಗಿ ಸಂವಿಧಾನದ ಆರ್ಟಿಕಲ್ 1 ರಲ್ಲಿ ಇಂಡಿಯಾ ಅಂದರೆ ಭಾರತವು ರಾಜ್ಯಗಳ ಒಕ್ಕೂಟ ಎಂದು ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!