ಜನ ಮನದ ನಾಡಿ ಮಿಡಿತ

Advertisement

ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಸಾವು..!

ಮಂಗಳೂರು; ವ್ಯಕ್ತಿ ಓರ್ವ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಮುಗೋಡಿಯಲ್ಲಿ ನಡೆದಿದೆ.

ಮೃತನನ್ನು ಚಂದ್ರಕಾಂತ್ (41) ಎಂದು ಗುರುತಿಸಲಾಗಿದ್ದು, ಸ್ಥಳೀಯ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಚಂದ್ರಕಾಂತ್ ಮೇಸೀ ಕೆಲಸದೊಂದಿಗೆ ಇತರ ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಿದ್ದರು. ನರ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದು ನಿನ್ನೆಯಷ್ಟೇ ಮನೆಗೆ ಬಂದಿದ್ದರು ಎನ್ನಲಾಗಿದೆ.
ನಿನ್ನೆ ಸಂಜೆ ಹೊತ್ತಿಗೆ ಚಿಕ್ಕಮ್ಮನ ಮನೆಗೆ ಹೋಗಿ ಬರುತ್ತೇನೆಂದು ಹೋಗಿದ್ದ ಚಂದ್ರಕಾಂತ್‌ ತಡ ರಾತ್ರಿಯಾದರೂ ಬಾರದ ಕಾರಣ ಸ್ಥಳೀಯರು ಶೋಧಕಾರ್ಯ ನಡೆಸಿದ್ದರು.

ಬಳಿಕ ಆವರಣ ಇಲ್ಲದ ಬಾವಿ ಸಮೀಪ ಇಂದು ಅವರ ಚಪ್ಪಲಿ ಕಾಣ ಸಿಕ್ಕಿದ್ದರಿಂದ ಬಾವಿಯಲ್ಲಿ ನೋಡುವಾಗ ಶವ ಪತ್ತೆಯಾಗಿದೆ. ಮಂಗಳೂರು ನಗರ ಠಾಣಾ ಸಬ್ ಇನ್ಸ್‌ಪೆಕ್ಟರ್ ಅನಿತಾ ನಿಕಂ ಮತ್ತು ಅಗ್ನಿಶಾಮಕದಳದ ನೆರವಿನೊಂದಿಗೆ ಶವವನ್ನು ಮೇಲಕ್ಕೆತ್ತಿ ಮಹಜರು ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!