ಜನ ಮನದ ನಾಡಿ ಮಿಡಿತ

Advertisement

ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಉಗ್ರಾಣಿಗೆ ಪುತ್ತೂರು ಶಾಸಕ ಅಶೋಕ್‌ ರೈ ವಾರ್ನಿಂಗ್‌..!

ಪುತ್ತೂರು: ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡುವುದಾಗಿ ಹೇಳಿ ಮಹಿಳೆಯಿಂದ ಪಡೆದ ಲಂಚದ ಹಣವನ್ನು ಹಿಂತಿರುಗಿಸುವಂತೆ ಪುತ್ತೂರು ಶಾಸಕರಾದ ಅಶೋಕ್‌ ರೈಯವರು ಗ್ರಾಮವೊಂದರ ಉಗ್ರಾಣಿಗೆ ಸೂಚನೆಯನ್ನು ನೀಡಿದ್ದಾರೆ.

ಕುಂಡಡ್ಕದಲ್ಲಿ ಶ್ರೀ ಕೃಷ್ಣ ಅಷ್ಟಮಿ ಕಾರ್ಯಕ್ರಮಕ್ಕೆ ತೆರಳಿದ ಶಾಸಕರ ಬಳಿ ಬಂದ ಚಂದ್ರಾವತಿ ಎಂಬ ಮಹಿಳೆ ನಾನು ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಸಂದರ್ಭದಲ್ಲಿ ಅಕ್ರಮ ಸಕ್ರಮಕ್ಕೆ ಅರ್ಜಿ ಹಾಕಿದ್ದೆ ನನ್ನ ಮನೆ ಸರಕಾರಿ ಜಾಗದಲ್ಲಿದೆ.
ನನ್ನ ಮನೆ ಇರುವ ಜಾಗವನ್ನು ಸಕ್ರಮ ಮಾಡಿಕೊಡಬೇಕೆಂದು ಅರ್ಜಿ ಸಲ್ಲಿಸಿದ್ದೇನೆ. ಸಲ್ಲಿಸಿದ ಅರ್ಜಿಯ ಎಲ್ಲಾ ದಾಖಲೆಗಳು ನನ್ನ ಬಳಿ ಇದೆ . ನಾನು ಅರ್ಜಿ ಕೊಟ್ಟಾಗ ನನ್ನಿಂದ ನನ್ನ ಗ್ರಾಮದ ಉಗ್ರಾಣಿ ಒಟ್ಟು 30 ಸಾವಿರ ಹಣವನ್ನು ಲಂಚವಾಗಿ ಪಡೆದುಕೊಂಡಿದ್ದಾರೆ. ಏಳು ವರ್ಷ ಕಳೆದರೂ ನನಗೆ ಅಕ್ರಮ ಸಕ್ರಮದಲ್ಲಿ ಜಾಗ ರೆಕಾರ್ಡ್‌ ಆಗಲಿಲ್ಲ, ನಾನು ಬಡವೆ, ನನ್ನಲ್ಲಿ ಏನೂ ಇಲ್ಲ. ನಾನು ಬೀಡಿಕಟ್ಟಿ ಜೀವನ ಮಾಡುವುದು, ಆದರೂ ನನ್ನಿಂದ ಹಣಪಡೆದುಕೊಂಡಿದ್ದಾರೆ.

ಹಣ ಕೊಟ್ಟರೂ ಕೆಲಸ ಮಾಡಿಲ್ಲ ನನಗೆ ನ್ಯಾಯ ಕೊಡಿ ಎಂದು ಶಾಸಕರಲ್ಲಿ ಮನವಿ ಮಾಡಿದ್ದಾರೆ. ಕೂಡಲೇ ಹಣ ಪಡೆದುಕೊಂಡ ಉಗ್ರಾಣಿಗೆ ಕರೆ ಮಾಡಿದ ಶಾಸಕರು ಬಡ ಮಹಿಳೆಯಿಂದ ಲಂಚವಾಗಿ ಪಡೆದುಕೊಂಡ 30 ಸಾವಿರ ಹಣವನ್ನು ವಾರದೊಳಗೆ ಮಹಿಳೆಗೆ ಪಾವತಿಸಿಬೇಕು ಇಲ್ಲವಾದರೆ ಕೆಲಸದಿಂದ ಸಸ್ಪೆಂಡ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಿಳೆಗೆ ಸಾಂತ್ವನ ಹೇಳಿದ ಶಾಸಕರು ನಿಮ್ಮ ಅರ್ಜಿಯನ್ನು ವಿಲೇವಾರಿ ಮಾಡುವಂತೆ ಸೂಚನೆ ಕೊಡುತ್ತೇನೆ. ಅಕ್ರಮ ಸಕ್ರಮ ಸಮಿತಿಯಾದ ತಕ್ಷಣವೇ ನಿಮ್ಮ ಜಾಗ ನಿಮಗೆ ರೆಕಾರ್ಡ್ ಆಗಲಿದೆ ಎಂದು ಹೇಳಿದಾಗ ಮಹಿಳೆ ಶಾಸಕರಿಗೆ ಧನ್ಯವಾದ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!