ಜನ ಮನದ ನಾಡಿ ಮಿಡಿತ

Advertisement

ಪುತ್ತೂರು : ಮನೆಯವರನ್ನು ಕಟ್ಟಿ ಹಾಕಿ ದರೋಡೆ; ಸ್ಥಳಕ್ಕೆ ಪಶ್ಚಿಮ ವಲಯ ಐಜಿಪಿ ಭೇಟಿ

ಪುತ್ತೂರು: ಪುತ್ತೂರು ಹೊರವಲಯದ ಬಡಗನ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರೋರ್ವರನ್ನು ಕಟ್ಟಿ ಹಾಕಿ ಅವರ ತಾಯಿಯಲ್ಲಿದ್ದ ಚಿನ್ನವನ್ನು ದರೋಡೆ ಮಾಡಿರುವುದಾಗಿ ತಿಳಿದು ಬಂದಿದೆ. ಪುತ್ತೂರು ಗ್ರಾಮಾಂತರ ಠಾಣೆ ದೂರು ದಾಖಲಾಗಿದೆ.


ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ಬಡಗನ್ನೂರು ಇವರ ಮನೆಗೆ ತಡ ರಾತ್ರಿ ಸುಮಾರು 10 ಜನರ ತಂಡವೊಂದು ಬಾಗಿಲು ಮುರಿದು ಒಳನುಗ್ಗಿ ಗುರು ಮತ್ತು ತಾಯಿಯ ಕೈ ಕಾಲು ಕಟ್ಟಿ ಹಾಕಿ ತಾಯಿಯಲ್ಲಿದ್ದ ಚಿನ್ನ ಮತ್ತು ಸ್ವಲ್ಪ ಹಣವನ್ನು ದೋಚಿದ್ದಾರೆ. ದರೋಡೆ ಮಾಡಿ ಹಿಂತಿರುಗುವಾಗ ಅವರ ಮೊಬೈಲ್ ಗಳನ್ನು ಬಾವಿ ಎಸೆದು ಹೋಗಿದ್ದಾರೆ ಎಂದು ವರದಿಯಾಗಿದೆ.
ಇಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಗುರು ಅವರ ತಾಯಿ ಸಂಬಂಧಿಕರಿಂದ ಚಿನ್ನದ ಸರ ಪಡೆದುಕೊಂಡು ಬಂದಿದ್ದರು. ಅದನ್ನೇ ದರೋಡೆಕೋರರು ದೋಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ಲಭ್ಯವಾಗಲಿದೆ.
ಎಸ್ಪಿ ಸಿ ಬಿ ರಿಷ್ಯಂತ್ ಮತ್ತು ಪೋಲಿಸ್ ತಂಡ ಸ್ಥಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!