ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ಹುಲಿವೇಷ ತೊಟ್ಟು ಕುಣಿಯುತಿದ್ದ ವೇಳೆ ನಡೆದ ಅಚ್ಚರಿಯ ಘಟನೆ

ಹುಲಿ ವೇಷವೆಂದರೆ ಬರಿ ಕುಣಿತವಲ್ಲ, ಅದು ಕರಾವಳಿಗರ ಭಾವನೆ ಹಾಗೂ ಆರಾಧನೆಯ ರೂಪವಾಗಿದೆ.

ಕಡಲನಗರಿಯಲ್ಲಿ ನಡೆಯುವಂತಹ ಪ್ರತಿಯೊಂದು ಹಿಂದೂ ಸನಾತನ ಧರ್ಮದ ಆಚರಣೆಗಳಲ್ಲಿ ಹುಲಿ ವೇಷ ಮಿಂಚುತ್ತದೆ. ಕೆಲವರು ಹರಕೆ ರೂಪದಲ್ಲಿ ಹುಲಿ ವೇಷವನ್ನು ಧಾರಣೆ ಮಾಡುವ ವಾಡಿಕೆ ಮಂಗಳೂರು, ಉಡುಪಿಗಳಲ್ಲಿ ಹೆಚ್ಚಾಗಿವೆ. ಅಂತೆಯೇ ಈ ವರ್ಷದ ಜನ್ಮಾಷ್ಟಮಿಯ ಪ್ರಯುಕ್ತ ಉಡುಪಿಯ ನಿಟ್ಟೂರಿನಲ್ಲಿ ಹುಲಿವೇಷ ಸ್ಪರ್ಧೆ ನಡೆದಿದ್ದು, ಈ ಹುಲಿವೇಷ ತೊಟ್ಟು ಕುಣಿಯುತಿದ್ದ ವೇಳೆ ವೇಷಧಾರಿ ಮೇಲೆ ಆವೇಶ ಬಂದ ಅಚ್ಚರಿ ಘಟನೆ ನಡೆದಿದೆ.


ಮೈಮೇಲೆ ಆವೇಶ ಬಂದು ವೇದಿಕೆಗೆ ಹಾಕಿದ್ದ ರೆಡ್ ಕಾರ್ಪೆಟ್ ನ್ನ ಬಾಯಲ್ಲಿ ಕಚ್ಚಿ ಹರಿದು ಹಾಕಿದ್ದಾರೆ. ಈ ಸಂದರ್ಭ ಹುಲಿವೇಷಧಾರಿಯನ್ನ ನಿಯಂತ್ರಣಕ್ಕೆ ತರುವಲ್ಲಿ ಸಹ ವೇಷಧಾರಿಗಳು ಹರಸಾಹಸ ಪಟ್ಟಿದ್ದು, ಈ ವೇಳೆ ಸಹವೇಷಧಾರಿಗೂ ಕಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ಇನ್ನೂ ಹರಕೆ ಹೊತ್ತು ವೇಷಹಾಕುವವರ ಮೈಮೇಲೆ ಆವೇಶ ಬರುತ್ತದೆ ಎಂಬ ಪ್ರತೀತಿ ಕರಾವಳಿಗರಲ್ಲಿದೆ. ಆವೇಶ ಬಂದಲ್ಲಿ ವೇಷಧಾರಿಯನ್ನ ನಿಯಂತ್ರಣಕ್ಕೆ ತರದೇ ಹೋದ ಪಕ್ಷದಲ್ಲಿ ಕಾಡಿಗೆ ಓಡಿಹೊಗಬಹುದು, ಇನ್ನೊಂದು ಜೀವಿಯ ಮೇಲೆ ಆಕ್ರಮಣ ಮಾಡಬಹುದು ಎಂಬ ನಂಬಿಕೆ ತುಳುವರದ್ದಾಗಿದೆ.
ಇನ್ನೂ ಉಡುಪಿಯಲ್ಲಿ ನಡೆದ ಘಟನೆ ಎಲ್ಲರನ್ನ ಆಶ್ಚರ್ಯ ಚಕಿತರನ್ನಾಗಿ ಮಾಡಿಸಿದಂತು ಸತ್ಯದ ಮಾತಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!