ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆಯಲ್ಲಿ ಯಕ್ಷಗಾನೀಯ ಮೊಸರು ಕುಡಿಕೆ

ಮೂಡುಬಿದಿರೆ ಕರಾವಳಿ ಮಾತ್ರವಲ್ಲ ನಾಡಿನಲ್ಲೇ ವಿಶೇಷ ಎನ್ನಬಹುದಾದ ಯಕ್ಷಗಾನೀಯ ಹಿನ್ನೆಲೆಯ ಶ್ರೀ ಕೃಷ್ಣ ವೇಷಧಾರಿಯೇ ಮೊಸರ ಕುಡಿಕೆಗಳನ್ನು ಚಕ್ರಾಯುಧದಿಂದ ಒಡೆಯುವ ವಿಶೇಷ ಮೊಸರು ಕುಡಿಕೆ ಉತ್ಸವ ಗುರುವಾರ ಮೂಡುಬಿದಿರೆಯಲ್ಲಿ ನಡೆಯಲಿದೆ.

ಪೇಟೆಯ ರಾಜಬೀದಿಗೆ ಅಡ್ಡಲಾಗಿ ಕಟ್ಟುವ ಹಗ್ಗಗಳಲ್ಲಿ ತೂಗುವ ಮೊಸರ ಕುಡಿಕೆಗಳನ್ನು ಶ್ರೀಕೃಷ್ಣನೇ ಇಲ್ಲಿ ಯಕ್ಷಗಾನೀಯ ಚೆಂಡೆ ಮದ್ದಳೆ ಜಾಗಟೆಯ ಹಿಮ್ಮೇಳಕ್ಕೆ ಕುಣಿದು ಹಗ್ಗ ಜಗ್ಗಾಡುತ್ತಾ ಸತಾಯಿಸುವವರನ್ನೂ ಮಣಿಸಿ ಜಿಗಿದು ಮಡಿಕೆಗಳನ್ನು ಚಕ್ರಾಯುಧದಿಂದ ಒಡೆಯುವ ಸೊಬಗು ಬೇರೆಲ್ಲೂ ಕಾಣದ ವಿಶೇಷತೆ.

ಶತಮಾನ ಪೂರೈಸಿ ಮುನ್ನಡೆದಿರುವ ಈ ವಿಶಿಷ್ಟ ಉತ್ಸವ ಇಲ್ಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವಕ್ಕೆ ಪೂರಕವಾಗಿ ನಡೆದು ಬಂದಿದೆ.

ಪೇಟೆಯಲ್ಲಿ ಉತ್ಸವಕ್ಕೆ ಪೂರಕವಾಗಿ ಸಾಂಸ್ಕೃತಿಕ ಕಲಾಪಗಳು ರಾಜಬೀದಿಯನ್ನು ರಂಗೇರಿಸಲು ಸಜ್ಜಾಗಿ ಶ್ರೀಕೃಷ್ಣ ಫ್ರೆಂಡ್ಸ್‌ ಸರ್ಕಲ್: ಪೇಟೆಯ ಕೆನರಾ ಬ್ಯಾಂಕ್‌ ಜಂಕ್ಷನ್ ಬಳಿ ತನ್ನ 37 ನೇ ವರ್ಷದ ಸಾಂಸ್ಕೃತಿಕ ಕಲಾಪಕ್ಕೆ ಮುಂದಾಗಿರುವ ಶ್ರೀ ಕೃಷ್ಣ ಫ್ರೆಂಡ್ಸ್‌ ಸರ್ಕಲ್ ಬೆಳಿಗ್ಗೆ ಭಜನಾ ಕಾರ್ಯಕ್ರಮ,ಸ್ಯಾಕ್ರೋಫೋನ್ ವಾದನ, ಸಂಗೀತ ಗಾನ ಸಂಭ್ರಮ ಹಮ್ಮಿಕೊಂಡಿದೆ. ಸಂಜೆ ವಿಶ್ರಾಂತ ಪ್ರಾಚಾರ್ಯ, ಕಂಬಳ ವಿದ್ವಾಂಸ ಕೆ. ಗುಣಪಾಲ ಕಡಂಬ ಅವರಿಗೆ ಶ್ರೀ ಕೃಷ್ಣ ಪ್ರಶಸ್ತಿ ಪ್ರದಾನ ದ ಸಭಾ ಕಾರ್ಯಕ್ರಮ, ಬಹುಮಾನ ವಿತರಣೆ ಗಣ್ಯರ ಕೂಡುವಿಕೆಯಲ್ಲಿ ನಡೆಯಲಿದೆ.

ನ್ಯೂಸೆಂಟ್ರಲ್ ಫ್ರೆಂಡ್ಸ್‌ ಸರ್ಕಲ್‌ ಪೇಟೆಯ ಶ್ರೀ ಹನುಮಂತ ದೇವಸ್ಥಾನದ ಬಳಿ ಅಪರಾಹ್ನ 3ರಿಂದ ಸಂಗೀತ ರಸಮ೦ಜರಿ ನೃತ್ಯ ಕಾರ್ಯಕ್ರಮ ಹಮ್ಮಿಕೊ೦ಡಿದೆ. ಶ್ರೀಕೃಷ್ಣ ಫ್ರೆಂಡ್ಸ್‌ ಸರ್ಕಲ್: ಕೃಷ್ಣತ್ಸವ: ಜವನೆರ್‌ಬೆದ್ರ ಸಂಘಟನೆ ಇಲ್ಲಿನ ನಿಶ್ಮಿತಾ ಸರ್ಕಲ್ ಬಳಿ ಕೃಷ್ಣತ್ಸವ ಹಮ್ಮಿಕೊಂಡಿದೆ. ಸಂಜೆ 5ರಿಂದ ಯಕ್ಷ-ಗಾನ ವೈಭವ, ಯಕ್ಷಗಾನ ಸಂಘಟಕ ಎಂ.ದೇವಾನಂದ ಭಟ್ ಅವರಿಗೆ ಸಮ್ಮಾನ, ಬಳಿಕ ಶ್ರೀಕೃಷ್ಣಾಂತರಂಗ ಯಕ್ಷಗಾನ ಪ್ರದರ್ಶನವಿದೆ

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!