ಜನ ಮನದ ನಾಡಿ ಮಿಡಿತ

Advertisement

ಲೊರೆಟ್ಟೊ ಮಾತಾ ಚರ್ಚಿನಲ್ಲಿ ʼಮೊಂತಿ ಫೆಸ್ತ್ʼ ಆಚರಣೆ

ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್ ) ತೆನೆಹಬ್ಬ ವನ್ನು ಭಕ್ತಿ ಪೂರ್ವಕವಾಗಿ ವಿಜ್ರಂಭಣೆಯಿಂದ ಆಚರಿಸಲಾಯಿತು.

ಚರ್ಚ್ ಧರ್ಮಗುರುಗಳಾದ ವ. ಫ್ರಾನ್ಸಿಸ್ ಕ್ರಾಸ್ತ , ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ಹಾಗೂ ವಂ ಪ್ರತಾಪ್ ನಾಯಕ್ ಬಲಿಪೂಜೆಯನ್ನು ಅರ್ಪಿಸಿದರು. ಚರ್ಚ್ ಧರ್ಮಗುರುಗಳು ದೆವರವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಅರ್ಥ ಪೂರ್ಣ ಪ್ರವಚನ ನೀಡಿದರು.

ಪೂಜೆಯಲ್ಲಿ ಮಕ್ಕಳು,ಭಕ್ತಾದಿಗಳು ಭಕ್ತಿ-ಶ್ರದ್ಧೆಯಿಂದ ಪಾಲ್ಗೊಂಡರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು..ಬಲಿ ಪೂಜೆಯಲ್ಲಿ ಭಕ್ತಾದಿಗಳು ಭಕ್ತಿಯಿಂದ ಎಲ್ಲಾರೂ ಪಾಲ್ಗೊಳ್ಳಲುಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು ಹಾಗೆ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು . ವಿವಿಧಬಗೆಯ ಹೂಗಳನ್ನು ತಂದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಸಂಭ್ರಮಕ್ಕೆ ಸಹಕರಿಸಿದ ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು.

ಬಲಿ ಪೂಜೆ ಬಳಿಕ ಆಗಮಿಸಿದ ಭಕ್ತಾದಿಗಳಿಗೆ ಉಪಹಾರ , ಹಾಗೂ ಕಬ್ಬನ್ನು ನೀಡಲಾಯಿತು. ಮಾತೆ ಮರಿಯಮ್ಮನವರ ಪಲ್ಲಕ್ಕಿಯನ್ನು ಹೂಗಳಿಂದ ಶೃಂಗರಿಸಲಾಗಿತ್ತು. ಚರ್ಚ್ ಪಾಲನಾ ಮಂಡಳಿ ನೇತೃತ್ವ ವಹಿಸಿದ್ದರು. ಧರ್ಮಗುರುಗಳು ಇಂದಿನ ಸಮಾರಂಭಕ್ಕೆ ಸಹಕರಿಸಿದ ಎಲ್ಲರನ್ನೂ ಧರ್ಮ ಗುರುಗಳು ಸ್ಮರಿಸಿ, ವಂದಿಸಿದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!