ಜನ ಮನದ ನಾಡಿ ಮಿಡಿತ

Advertisement

ಕರಾವಳಿ ಮಳೆ ಕೊರತೆ, ಬತ್ತದ ಕೃಷಿಗೆ ಅಳವಡಿಸಿ ಈ ವೈಜ್ಞಾನಿಕತೆ…

ದಕ್ಷಿಣ ಕನ್ನಡ : ಕರಾವಳಿ ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆ ಕಾಡುತ್ತಿದ್ದು, ಪ್ರಸ್ತುತ ಬತ್ತದ ಬೆಳೆಗಾರರು ಕಂಗಾಲಾಗಿದ್ದಾರೆ, ಹೀಗೆ ಮುಂದುವರೆದ ಲ್ಲಿ ಮುಂದಿನ ದಿನಗಳಲ್ಲಿ ಇತರ ಬೆಳೆಗಳಿಗೂ ನೀರಿನ ಅಭಾವ ತಲೆದೋರುವ ಎಲ್ಲ ಸಾಧ್ಯತೆಗಳಿವೆ, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಬರಗಾಲ ಬರುವ ಸಾಧ್ಯತೆ ಇದೆ, ಆಹಾರ ಉತ್ಪನ್ನಕ್ಕಾಗಿ ಪರದಾಡುವ ಕಾಲ ಎದುರಾಗಬಹುದು.              

                        ಕರಾವಳಿ ಕರ್ನಾಟಕದ ಪ್ರಮುಖ ಆಹಾರ ಭತ್ತದಿಂದ ಬೆಳೆಯುವ ಅನ್ನ, ಬತ್ತದ ಬೆಳೆಯೇ ಈಗ ನೀರಿನ ಅಭಾವದಿಂದ  ತೀವ್ರ ಸಂಕಷ್ಟಕ್ಕೆ ತುತ್ತಾಗಿದ್ದು ಮುಂದಿನ ದಿನಗಳಲ್ಲಿ ಅಕ್ಕಿ ಬೆಲೆ ತೀವ್ರ ಗತಿಯಲ್ಲಿ ಇರುವ ಸಾಧ್ಯತೆ ಇದೆ, ಅದೇ ರೀತಿ ವಾಣಿಜ್ಯ ಬೆಳೆಗಳು ಕೂಡ ಆಹಾರ ಉತ್ಪನ್ನ ಕೊರತೆಗೆ ಕಾರಣವಾಗಬಹುದು  ಎಂಬುದು ತಜ್ಞರ ಅಭಿಪ್ರಾಯ.         ಕರಾವಳಿ ಕರ್ನಾಟಕದ  ರೈತರಿಂದ ಭತ್ತದ ಸಸಿಗಳ ಒಣಗುವಿಕೆಯ ಕುರಿತು ಸಮಸ್ಯೆ ವರದಿಯಾದ ಹಿನ್ನೆಲೆ, ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ವರದಿಯ ಪ್ರಕಾರ  ಆಗಸ್ಟ್ ತಿಂಗಳಿನಲ್ಲಿ ಮಳೆಯಾಗದೇ ಇರುವುದರಿಂದ ಪ್ರಮುಖವಾಗಿ ಭತ್ತದ ಬೆಳೆ ಸೋತು ಸೊರಗುತ್ತಿರುತ್ತದೆ. ಗದ್ದೆಗಳಲ್ಲಿ ನೀರಿಲ್ಲದ ಕಾರಣ ಕಳೆಗಳು ಹಾಗೂ ನೀರಿನ ಸಮಸ್ಯೆಯಿಂದಾಗಿ ಮೇಲು ಗೊಬ್ಬರ ಕೊಡಲು ಸಾಧ್ಯವಾಗದೇ ಇದ್ದುದರಿಂದ ಪೋಷಕಾಂಶಗಳ ಕೊರತೆ ಕಾಣುತ್ತಿದೆ.

ಮುಖ್ಯವಾಗಿ ಪೋಟಾಷ್ ಕೊರತೆಯಿಂದಾಗಿ ಭತ್ತದ ಎಲೆಗಳು ಕೆಂಪು ಬಣ್ಣಕ್ಕೆ ತಿರುಗಿ ಹೆಚ್ಚು ತೆಂಡೆಗಳು ಒಡೆಯದೇ ಒಣಗುವ ಸ್ಥಿತಿಯಲ್ಲಿರುತ್ತದೆ.  ಎಲೆಗಳು ಕೆಂಪಾಗುತ್ತಿರುವುದು ಹೆಚ್ಚಾಗಿ ಕಂಡುಬಂದಿದ್ದು, ಯಾವುದೇ ಕೀಟ ರೋಗದ ಭಾದೆ ಇರುವುದಿಲ್ಲ ಎಂಬ ಅಂಶಗಳನ್ನು ಗಮನಿಸಲಾಗಿರುತ್ತದೆ, ನೀರಿನ ಕೊರತೆ  ಮೂಲ ಕಾರಣ ಎನ್ನಲಾಗಿದೆ.        

ನೀರೊದಗಿಸುವ ಸಾಧ್ಯತೆಯಿರುವ ಕಡೆ ಮಳೆಗಾಗಿ ಕಾಯದೇ ಕೂಡಲೇ ನೀರು ಒದಗಿಸುವುದು, ಭೂಮಿಯ ಫಲವತ್ತತೆ ಪರೀಕ್ಷೆ ಮಾಡಿಸುವುದು, ನೀರು ಒದಗಿಸಿದ ಗದ್ದೆಗಳಿಗೆ ಯುರಿಯಾ 30 ಕೆ.ಜಿ ಹಾಗೂ ಎಂ.ಒ.ಪಿ 15 ಕಿ.ಗ್ರಾಂ ಪ್ರತಿ ಎಕರೆಗೆ ಮೇಲು ಗೊಬ್ಬರವಾಗಿ ನೀಡುವುದು ಹಾಗೂ ಗದ್ದೆಗಳಲ್ಲಿ ಕಳೆ ನಿಯಂತ್ರಣ ಮಾಡುವ ಮೂಲಕ ವೈಜ್ಞಾನಿಕ ಸಲಹೆಗಳನ್ನು ಅನುಸರಿಸುವಂತೆ ಕೃಷಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!