ಜನ ಮನದ ನಾಡಿ ಮಿಡಿತ

Advertisement

ಡಾ. ಶಂಸುಲ್ ಇಸ್ಲಾಂ ಉಪನ್ಯಾಸ ಖಂಡಿಸಿ, ಮಂಗಳೂರು ವಿ.ವಿಯಲ್ಲಿ ಎಬಿವಿಪಿ‌‌ ಪ್ರತಿಭಟನೆ

ಮಂಗಳೂರು; ಮಂಗಳೂರು ವಿಶ್ವ ವಿದ್ಯಾನಿಲಯ ಕಾಲೇಜಿನಲ್ಲಿ ಬಿ ವಿ ಕಕ್ಕಿಲ್ಲಾಯ ಪ್ರತಿಷ್ಠಾನದಿಂದ ಉಪಾನ್ಯಾಸ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಇದನ್ನ ವಿರೋಧಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ. ಕಾಲೇಜಿನಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮ 1857 – ಜಂಟಿ ಬಲಿದಾನಗಳು , ಜಂಟಿ ವಾರಿಸುದಾರಿಕೆ ಕುರಿತು ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಆದರೆ ವಿದ್ಯಾರ್ಥಿಗಳು ಈ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆ ಮಾಡಬೇಡಿ ಎಂದು ಪ್ರತಿಭಟನೆ ನಡೆಸಿದ್ದಾರೆ. 

ದೆಹಲಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರೊಫೆಸರ್ ಡಾ. ಶಂಸುಲ್‌ ಇಸ್ಲಾಂ ಅವರು ಉಪನ್ಯಾಸ ನೀಡಲಿದ್ದಾರೆ  ಎಂಬ ಕಾರಣಕ್ಕೆ ಎಬಿವಿಪಿ‌‌ ಭಾರೀ ವಿರೋಧ ವ್ಯಕ್ತಪಡಿಸಿದೆ. ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ, ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಗೆ ಸಂಚು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, ಈ ಹಿನ್ನಲೆ ಕಾರ್ಯಕ್ರಮ‌ ನಡೆಯದಂತೆ ತಡೆಯಲು ಎಬಿವಿಪಿ ಯೋಜನೆ ರೂಪಿಸಿದೆ.

ಅದಲ್ಲದೇ ಆರ್ ಎಸ್ ಎಸ್ ನ ತೀವ್ರ ವಿರೋಧಿ ಆಗಿರುವ ಡಾ ಶಂಸುಲ್ ಇಸ್ಲಾಂ ರವರು ಕಾಲೇಜಿನಲ್ಲಿ ಉಪನ್ಯಾಸ ನೀಡಲು ಅರ್ಹರಲ್ಲ ಎಂಬ ಮನೋಭಾವನೆ ವಿದ್ಯಾರ್ಥಿಗಳದ್ದಾಗಿದೆ.  ಈ ಹಿನ್ನಲೆ ವಿದ್ಯಾರ್ಥಿಗಳು ಗೋ ಬ್ಯಾಕ್ ಶಂಸುಲ್ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!