ಜನ ಮನದ ನಾಡಿ ಮಿಡಿತ

Advertisement

ಫರಂಗಿಪೇಟೆಯ ಜಂಕ್ಷನ್ ನಲ್ಲಿ ಡ್ರಗ್ಸ್ ಮುಕ್ತ ಗ್ರಾಮ ಜನಜಾಗೃತಿ ಅಭಿಯಾನ ಕಾರ್ಯಕ್ರಮ

ಬಂಟ್ವಾಳ : ಪುದು, ತುಂಬೆ ಮತ್ತು ಅಡ್ಯಾರ್ ಈ ಮೂರು ಗ್ರಾಮಗಳ 20 ಜಮಾತ್ ಹಾಗೂ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯ ವಿರುದ್ಧ ಜನಜಾಗೃತಿ ಮೂಡಿಸಲು ಫರಂಗಿಪೇಟೆಯ ಜಂಕ್ಷನ್ ನಲ್ಲಿ ಡ್ರಗ್ಸ್ ಮುಕ್ತ ಗ್ರಾಮ ಜನಜಾಗೃತಿ ಅಭಿಯಾನ ಕಾರ್ಯಕ್ರಮ ನಡೆದಿದೆ.

ಸಭಾ ಕಾರ್ಯಕ್ರಮಕ್ಕೂ ಮುನ್ನ ಕುಂಡೇಲು ಸರ್ಕಲ್ ನಿಂದ ಫರಂಗಿಪೇಟೆ ಜಂಕ್ಷನ್ ವರೆಗೆ ಕಾಲ್ನಡಿಗೆ ಜಾಥಾ ನಡೆಯಿತು. ಬಿ.ಎ ಕೈಗಾರಿಕಾ ತರಬೇತಿ ಮತ್ತು ತಾಂತ್ರಿಕ ಕೇಂದ್ರ ತುಂಬೆ ಮತ್ತು ಬಿ.ಎ ಪದವಿ ಪೂರ್ವ ಕಾಲೇಜು ತುಂಬೆ, ಮಸೂದ್ ಕಾಲೇಜ್ ಆಫ್ ನರ್ಸಿಂಗ್ ಮತ್ತು ಸ್ಕೂಲ್ ನರ್ಸಿಂಗ್ ಮಂಗಳೂರು, ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಮತ್ತು ಎ ಶಾಮ ರಾವ್ ನರ್ಸಿಂಗ್ ಸ್ಕೂಲ್ ವಳಚ್ಚಿಲ್ ಮಂಗಳೂರು, ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ಕಂಕನಾಡಿ ಮಂಗಳೂರು, ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ & ಫಿಸಿಯೋಥೆರಪಿ ಬಲ್ಮಠ ಮಂಗಳೂರು, ಸ್ಕೂಲ್ ಆಫ್ ಸೋಶಿಯಲ್ ವರ್ಕ್, ರೋಶನಿ ನಿಲಯ ಮಂಗಳೂರು ವಿದ್ಯಾರ್ಥಿಗಳು ಕಾಲ್ನಡಿಗೆ ಜಾಥದಲ್ಲಿ ಭಾಗವಹಿಸಿದ್ರು.

ಫರಂಗಿಪೇಟೆ ಜಂಕ್ಷನ್ ನಿಂದ ವಳಚ್ಚಿಲ್, ತುಂಬೆ ಮಾರಿಪಳ್ಳವಾಗಿ ಕಾರ್ಯಕ್ರಮದ ವೇದಿಕೆಯ ವರಗೆ ವಾಹನ ಜಾಥದಲ್ಲಿ ಹಲವು ಸಂಘ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ರು, ಇದೇ ವೇಳೆ ಫಾದರ್ ಮುಲ್ಲರ್ ಕಾಲೇಜ್ ಆಫ್ ನರ್ಸಿಂಗ್ ಕಂಕನಾಡಿ ಮಂಗಳೂರು ವಿದ್ಯಾರ್ಥಿಗಳು ಬೀದಿ ನಾಟಕ ಪ್ರದರ್ಶನ ನೀಡಿದರು . ಫರಂಗಿಪೇಟೆ ಮೊಹಿಯುದ್ದೀನ್ ಜುಮಾ ಮಸೀದಿಯ ಖತೀಬರಾದ ಅಬ್ಬಾಸ್ ದಾರಿಮಿ ರವರು ದುಃಆ ನೆರವೇರಿಸಿದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಡಿ.ವೈ.ಎಫ್.ವೈ.ಪ್ರಮುಖರಾದ ಮುನೀರ್ ಕಾಟಿಪಳ್ಳ ಅವರು ಮಾತನಾಡಿ, ಡ್ರಗ್ಸ್ ಮುಕ್ತವಾಗಿ ಮಾರ್ಪಾಡು ಮಾಡಲು ಹೊರಟಿರುವ ರೆಸ್ಕ್ಯೂ ಸಂಘಟನೆಯನ್ನು ನಾವು ಅತ್ಯಂತ ಪ್ರೀತಿಯಿಂದ ಗೌರವಿಸುತ್ತೇವೆ. ಆದರೆ ಇದು ಕೇವಲ ಜನಜಾಗೃತಿ ಕಾರ್ಯಕ್ರಮ ವಾಗದೆ ಅಭಿಯಾನದ ರೂಪದಲ್ಲಿ ಮುಂದುವರಿಯಬೇಕು. ಡ್ರಗ್ಸ್ ನ ಜಾಲದಲ್ಲಿ ಸಿಲುಕಿರುವ ಯುವಕ ಯುವತಿಯರನ್ನು ಬಂಧಿಸುವ ಮೂಲಕ ಮಾಫಿಯಾವನ್ಹು ತಡೆಯಲು ಸಾಧ್ಯವಿಲ್ಲ, ಅವರ ಜೊತೆ ಮಾಫಿಯಾದ ಹಿಂದೆ ಇರುವ ಪೆಡ್ಲರ್ ಗಳನ್ನು ಹಾಗೂ ಜಾಲದ ಮೂಲವನ್ನು ಕಂಡುಹಿಡಿದು ಅವರನ್ನು ಬಂಧಿಸುವ ಕೆಲಸ ಪೋಲೀಸ್ ಇಲಾಖೆಯ ಮೂಲಕ ಆಗಬೇಕಿದೆ. ಅಧಿಕಾರಿಗಳ ಜೊತೆ ಗ್ರಾಮಸ್ಥರು ,ಸಂಘಸಂಸ್ಥೆಗಳು ಕೈಜೋಡಿಸಿ ಸಹಕಾರ ನೀಡಿದಾಗ ಪ್ರತಿ ಮನೆ ನೆಮ್ಮದಿಯಿಂದ ಇರಬಹುದು ಎಂದು ಅವರು ಹೇಳಿದರು.
ಜಿಲ್ಲೆಯ ಕೋಮು ಗಲಭೆಯ ಸಹಿತ ಅಶಾಂತಿಗೆ ಡ್ರಗ್ಸ್ ಮಾಫಿಯಾವೇ ಮೂಲ ಕಾರಣವಾಗಿದ್ದು, ಜಾತಿಮತ ಪಂಗಡ ಮರೆತು ಇದರ ವಿರುದ್ದ ಹೋರಾಟ ಮಾಡಬೇಕಾಗಿದೆ ಎಂದು ಅವರು ಕರೆ ನೀಡಿದರು.

ಡಾ॥ ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ, ಕೆ.ಎ ಇಕ್ಬಾಲ್ ಬಾಳಿಲ, ಶಿಹಾಬುದ್ದೀನ್ ತಲಪಾಡಿ ರವರು ಜಾಗತಿಕ ಸಂದೇಶ ಭಾಷಣ ಮಾಡಿದರು, ಅಬ್ದುಲ್ ಅಝೀಝ್ (ಮೈಸೂರು ಬಾವ), ಇಸ್ಮಾಯಿಲ್ ಕೆ.ಇ.ಎಲ್ ವಳಚ್ಚಿಲ್,20 ಜಮಾತ್ ಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಪದಾಧಿಕಾರಿಗಳು, ಪುದು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಮತ್ತು ಸದಸ್ಯರುಗಳು, ಹಲವು ಸಂಘ ಸಂಸ್ಥೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಮತ್ತು ಊರಿನ ನಾಗರಿಕರು ಜಾಗತಿಕ ಅಭಿಯಾನದಲ್ಲಿ ಭಾಗವಹಿಸಿದ್ದರು. ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಅಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಮಾರಿಪಳ್ಳ ರವರು ಪ್ರಾಸ್ತಾವಿಕ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಅಶ್ರಫ್ ಮಲ್ಲಿ ದನ್ಯವಾದ ನೀಡಿದರು. ನೌಫಲ್ ಕೆ.ಬಿ.ಎಸ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!