ಜನ ಮನದ ನಾಡಿ ಮಿಡಿತ

Advertisement

ಬಿ.ಕೆ ಹರಿಪಸ್ರಾದ್ ವಿರುದ್ಧ ಅಸಮಾಧಾನ ಹೊರ ಹಾಕಿದ ಸಿದ್ದರಾಮಯ್ಯ

ಪದೇ ಪದೇ ಬಿ.ಕೆ ಹರಿಪ್ರಸಾದ್ ಅವರು ವೈಯಕ್ತಿಕವಾಗಿ ಟೀಕೆ ಮಾಡುವ ಮೂಲಕ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಅಸಮಾಧಾನಗೊಂಡಿದ್ದಾರೆ.

ಬೆಂಗಳೂರಿನಲ್ಲಿ ನಿನ್ನೆ ನಡೆದ ಈಡಿಗ ಸಮುದಾಯದ ಸಭೆಯಲ್ಲಿ ಬಿ.ಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯರವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ರು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ವೈಯಕ್ತಿಕವಾಗಿ ಟೀಕಿಸುತ್ತಿದ್ದಾರೆ. ಬಹಿರಂಗವಾಗಿ ಹೇಳಿಕೆಗಳನ್ನ ನೀಡುವ ಮೂಲಕ ನನ್ನನ್ನು ತೇಜೋವಧೆ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿದ್ದಾರೆ.ಅಲ್ಲದೇ ಎಐಸಿಸಿ ನಾಯಕರಿಗೆ ದೂರವಾಣಿ ಕರೆ ಮಾಡುವ ಮೂಲಕ ಸಿದ್ದರಾಮಯ್ಯ ಬೇಸರ ಹೊರ ಹಾಕಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ರಣ್​ದೀಪ್​ ಸಿಂಗ್​ ಸುರ್ಜೇವಾಲ ಅವರಿಗೆ ಕರೆ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಬಹಿರಂಗ ವೇದಿಕೆಗಳಲ್ಲಿ ನನ್ನನ್ನೇ ಟಾರ್ಗೆಟ್ ಮಾಡಿ ಮಾತನ್ನಾಡುತ್ತಿರುವುದು ಸರಿಯಲ್ಲ. ಏನೇ ಅಸಮಾಧಾನ ಇದ್ದರೂ ಪಕ್ಷದ ವೇದಿಕೆಗಳಲ್ಲಿ ಮಾತನಾಡಬೇಕು. ಅದನ್ನ ಬಿಟ್ಟು ಮಾಧ್ಯಮಗಳ ಮುಂದೆ ಹೀಗೆ ಹೇಳಿಕೆ ನೀಡುವುದು ಸರಿಯಲ್ಲ. ಹಿರಿಯ ನಾಯಕರು ಎನಿಸಿಕೊಂಡವರೇ ಹೀಗೆ ಮಾತನ್ನಾಡಿದ್ರೆ ಹೇಗೆ. ಮೊದಲು ಹೇಳಿಕೆಗಳನ್ನ ನೀಡದಂತೆ ಸ್ಪಷ್ಟ ಸೂಚನೆ ಕೊಡಿ ಎಂದು ಕೋಪದಿಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!