ಜನ ಮನದ ನಾಡಿ ಮಿಡಿತ

Advertisement

ಮುಷ್ಕರ ಹಿನ್ನಲೆ ನಾಳೆ ಶಾಲೆಗಳಿಗೆ ರಜೆ ಘೋಷಣೆ..!

ರಾಜ್ಯ ಸರಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಬಹಳ ನಷ್ಟ ಉಂಟಾಗಿದ್ದು, ಇದಕ್ಕೆ ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಯನ್ನು ಪೂರೈಸಬೇಕೆಂದು ಒತ್ತಾಯಿಸಿ, ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಮುಷ್ಕರವನ್ನು ನಾಳೆ ಕೈಗೊಂಡಿದೆ.

ಇಂದು ರಾತ್ರಿಯಿಂದಲೇ ಈ ಸಾರಿಗೆ ಬಂದ್‌ ಆಗಲಿದ್ದು, ಕೆಲವು ಖಾಸಗಿ ಶಾಲೆಗಳಿಗೆ ಸೋಮವಾರ ಬೆಂಗಳೂರಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದ ಬಂದ್‌ಗೆ ಶಾಲಾ ವಾಹನಗಳ ಮಾಲೀಕರು ಬೆಂಬಲ ನೀಡಿದ್ದು, ಶಾಲಾ ಮಕ್ಕಳಿಗೆ ಹೋಗಲು ತೊಂದರೆಯಾಗುವುದರಿಂದ ಬೆಂಗಳೂರಿನ ಆರ್ಕಿಡ್‌ ಶಾಲೆ ಸೇರಿದಂತೆ ಕೆಲವು ಖಾಸಗಿ ಶಾಲೆಗಳು ನಾಳೆ ರಜೆ ಘೋಷಣೆ ಮಾಡಿದೆ.

ಸರಕು ಸಾಗಣೆ ವಾಹನ, ಶಾಲಾ ವಾಹನ, ಟ್ಯಾಕ್ಸಿ, ಖಾಸಗಿ ಬಸ್‌, ಓಲಾ, ಉಬರ್‌, ಆಟೋ ಸೋಮವಾರ ರಸ್ತೆಗಿಳಿಯುವುದಿಲ್ಲ. ಅನೇಕ ಶಾಲೆಗಳು ರಜೆ ಘೋಷಣೆ ಮಾಡಿದ್ದು, ಹಾಗೆ ಮತ್ತಷ್ಟು ಶಾಲೆಗಳು ರಜೆ ಘೋಷಣೆ ಮಾಡಲಿದೆ ಎಂದು ಒಕ್ಕೂಟದ ಪ್ರಮುಖ ಜಿ ರವಿಕುಮಾರ್‌ ಮಾಹಿತಿ ನೀಡಿದ್ದಾರೆ.

ಇನ್ನೂ ಕರ್ನಾಟಕ ಖಾಸಗಿ ಶಾಲಾ ವಾಹನಗಳ ಯೂನಿಯನ್‌ ವತಿಯಿಂದ ಖಾಸಗಿ ಸಾರಿಗೆ ಮುಷ್ಕರಕ್ಕೆ ಬೆಂಬಲ ನೀಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!